ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಹನುಮಾನ್ ಚಾಲೀಸಾ ಆಲಿಸುವುದು ಅಪರಾಧವಾಗಿತ್ತು ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಒಬ್ಬರ ನಂಬಿಕೆಯನ್ನು ಪಾಲಿಸುವುದು ಕಷ್ಟ ಎಂದು ಅವರು ಟೀಕಿಸಿದ್ದಾರೆ. ರಾಜಸ್ಥಾನದಲ್ಲಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮರು ಹಂಚಿಕೆ ಮಾಡುತ್ತದೆ ಎಂದು ಪುನರುಚ್ಚರಿಸಿರುವ ಪ್ರಧಾನಿ ಮೋದಿ ಈ ಹೇಳಿಕೆ ಕಾಂಗ್ರೆಸ್ ಹಾಗೂ ಇಂಡಿಯ ಮೈತ್ರಿಕೂಟವನ್ನು ಕೆರಳಿಸಿದ್ದು, ಎಲ್ಲಾ ಕಡೆ ಮೋದಿಯನ್ನು ನಿಂದಿಸಲು ಪ್ರಾರಂಭಿಸಿದ್ದಾರೆ ಎಂದು ಹೇಳಿದರು.