‘ಕಡಪ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಕಡಪದ ಜನರು ವೈ.ಎಸ್ ರಾಜಶೇಖರ ರೆಡ್ಡಿ ಹಾಗೂ ವಿವೇಕಾನಂದ ಅವರನ್ನು ಮರೆತಿಲ್ಲ. ಅವರನ್ನು ನೆನಪಿನಲ್ಲಿಟ್ಟುಕೊಂಡು ಈ ಬಾರಿ ಜನ ಮತ ಚಲಾಯಿಸಲಿದ್ದಾರೆ’ ಎಂದು ಶರ್ಮಿಳಾ ಹೇಳಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಇಡುಪುಲಪಾಯದಲ್ಲಿರುವ ತಂದೆ ರಾಜಶೇಖರ ರೆಡ್ಡಿ ಅವರ ಸಮಾಧಿಗೆ ತೆರೆಳಿ ಪೂಜೆ ಸಲ್ಲಿಸಿದರು.