‘ವೇಮುಲ ಅವರು 2016ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತರಿಗೆ ಹಲವು ಸಮಸ್ಯೆಗಳಿದ್ದವು, ಅವು ಆತ್ಮಹತ್ಯೆಗೆ ಪ್ರೇರೇಪಿಸಿವೆ. ಅವರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಲಿಲ್ಲ. ಅದು ಅವರಿಗೂ ತಿಳಿದಿತ್ತು. ಅವರಿಗೆ ಎಸ್.ಸಿ ಪ್ರಮಾಣಪತ್ರವನ್ನು ಅವರ ತಾಯಿಯೇ ಕೊಡಿಸಿದ್ದರು. ಇದು ಬಹಿರಂಗವಾದರೆ ಹಲವು ಸಂಕಷ್ಟಗಳು ಎದುರಾಗುತ್ತವೆ ಎಂದು ಅವರು ನಿರಂತರ ಭಯದಲ್ಲಿದ್ದರು. ತಾನು ಗಳಿಸಿದ ಶೈಕ್ಷಣಿಕ ಪದವಿಗಳು ವ್ಯರ್ಥವಾಗುತ್ತವೆ ಮತ್ತು ಕಾನೂನು ಕ್ರಮವನ್ನೂ ಎದುರಿಸಬೇಕಾಗುತ್ತದೆ ಎಂದು ಅವರು ಚಿಂತಿತರಾಗಿದ್ದರು’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.