ನವದೆಹಲಿ: ಸಾರ್ವತ್ರಿಕ ಚುನಾವಣೆಯಲ್ಲಿ ಕಣದಲ್ಲಿರುವ ಅಭ್ಯರ್ಥಿಗಳಿಗಿಂತ ‘ನೋಟಾ’ಗೆ (ಮೇಲಿನ ಯಾರೂ ಅಲ್ಲ) ಹೆಚ್ಚು ಮತಗಳು ದೊರೆತರೆ ಆ ಚುನಾವಣೆಯನ್ನು ಅನೂರ್ಜಿತಗೊಳಿಸಿ, ಹೊಸ ಚುನಾವಣೆಗೆ ಆದೇಶಿಸಲು ನಿಯಮ ರೂಪಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಕುರಿತು ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್, ಚುನಾವಣಾ ಆಯೋಗಕ್ಕೆ ಶುಕ್ರವಾರ ಸೂಚಿಸಿ ನೋಟಿಸ್ ಜಾರಿಗೊಳಿಸಿದೆ.