‘ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇಶದ ಮಹಿಳೆಯರು ಕೋಪಗೊಂಡಿದ್ದಾರೆ. ಪ್ರಧಾನಿ ಮೋದಿ ಅವರ ರಕ್ಷಣೆಯಲ್ಲಿ ಐದು ವರ್ಷಗಳ ಕಾಲ ಸಂಸತ್ತಿನಲ್ಲಿ ಸುರಕ್ಷಿತವಾಗಿದ್ದ ವ್ಯಕ್ತಿಯ ನಿಜವಾದ ಗುಣವೇನು ಎಂದು ಮಹಿಳೆಯರು ಚಿಂತಿಸುತ್ತಿದ್ದಾರೆ. ಈ ರೀತಿಯ ಕೃತ್ಯವನ್ನು ಬೇರೆಯವರು ಎಸಗಿದ್ದರೆ, ಮೋದಿ ಅವರು, ನಮ್ಮ ಹೆಣ್ಣು ಮಕ್ಕಳ ರಕ್ಷಣೆಗಾಗಿ ಅಪರಾಧಿಯನ್ನು ಹಿಡಿದಿದ್ದೇವೆ ಎಂದು ದೇಶದಾದ್ಯಂತ ಹೇಳಿಕೊಂಡು ತಿರುಗುತ್ತಿದ್ದರು. ಅದೇ ತಮ್ಮ ಪ್ರೀತಿಪಾತ್ರ ವ್ಯಕ್ತಿ ಈ ಕೃತ್ಯದಲ್ಲಿ ಭಾಗಿಯಾಗಿರುವುದರಿಂದ ಅವರ ನಿಲುವು ಏನು ಎಂಬುದು ಇಡೀ ದೇಶದ ಕಣ್ಣೆದುರಿಗೆ ಇದೆ’ ಎಂದು ವಾಗ್ದಾಳಿ ನಡೆಸಿದರು.