ವೀರೇಂದ್ರ ಪಾಟೀಲ ಅವರಿಂದ ಅಧಿಕಾರ ಕಿತ್ತುಕೊಂಡು, ಬಿ.ಎಸ್.ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಿದ್ದ ಕಾಂಗ್ರೆಸ್, ಲಿಂಗಾಯತರಿಗೆ ಅಪಮಾನ ಮಾಡಿತ್ತು. ಈಗ ಒಕ್ಕಲಿಗರನ್ನು ಟಾರ್ಗೆಟ್ ಮಾಡಿ ಒಂದು ಲಕ್ಷ ಪೆನ್ಡ್ರೈವ್ ತಯಾರು ಮಾಡಿ ಹಂಚಲಾಗಿದೆ. ಎಸ್ಐಟಿ ರಬ್ಬರ್ ಸ್ಟ್ಯಾಂಪ್ ಆಗಿದ್ದು, ಸಿಎಂ ಸಿದ್ದರಾಮಯ್ಯ ಹೇಳಿದಂತೆ ಕೇಳುತ್ತದೆ. ವಿಡಿಯೊ ಹಂಚುವುದು ಅಪರಾಧ ಎಂದು ಎಸ್ಐಟಿ ಹೇಳಿದೆ. ಪೆನ್ಡ್ರೈವ್ ಕೊಟ್ಟ ಚಾಲಕನನ್ನು ಜೈಲಿಗೆ ಹಾಕಿಲ್ಲ. ಪೆನ್ಡ್ರೈವ್ ಹಂಚಿದವರಲ್ಲಿ ಎಷ್ಟು ಜನರನ್ನು ಎಸ್ಐಟಿ ಜೈಲಿಗೆ ಹಾಕಿದೆ ಎಂದು ಅಶೋಕ ಪ್ರಶ್ನಿಸಿದರು.