ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಎಲ್ಲ ಸರ್ಕಾರಗಳ ಕಾಲದಲ್ಲೂ ಕೊಲೆಗಳು ನಡೆದಿವೆ. ರಾಜ್ಯದಲ್ಲಿ ಕಾನೂನು–ಸುವ್ಯವಸ್ಥೆ ಕಾಪಾಡುವುದನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಬೇರೆ ರಾಜ್ಯಗಳಿಗಿಂತ ನಮ್ಮಲ್ಲಿ ಶಾಂತಿ–ಸುವ್ಯವಸ್ಥೆ ಚೆನ್ನಾಗಿದೆ. ಯಾವುದೇ ಕುಕೃತ್ಯ ನಡೆದರೂ ನಾವು ಖಂಡಿಸುತ್ತೇವೆ. ಆದರೆ, ಬಿಜೆಪಿ–ಜೆಡಿಎಸ್ನವರು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ಖಂಡನೀಯ. ಇಂಥ ಪ್ರಕರಣಗಳಿಂದ ನಮಗೆ ಯಾವುದೇ ವ್ಯತಿರಿಕ್ತ ಪರಿಣಾಮ ಆಗುವುದಿಲ್ಲ’ ಎಂದರು.