ಎನ್ಡಿಆರ್ಎಫ್ ನಿಯಮಾವಳಿಗಳ ಪ್ರಕಾರ ₹18,171 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಕೇಂದ್ರವು ₹3,498 ಕೋಟಿಗಷ್ಟೇ ಅನುಮೋದನೆ ನೀಡಿ ₹3,454 ಕೋಟಿ ಬಿಡುಗಡೆಗೊಳಿಸಿದೆ. ಇದು ತೀರಾ ಕಡಿಮೆ’ ಎಂದು ಆರೋಪಿಸಿ ರಾಜ್ಯವು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ‘ಕೇಂದ್ರ ಸರ್ಕಾರ ನೇಮಿಸಿದ ಅಂತರ್ ಸಚಿವಾಲಯದ ತಜ್ಞರ ಸಮಿತಿಯು ಬರಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿತ್ತು. ಆ ವರದಿಯ ಆಧಾರದಲ್ಲಿ ಸಚಿವರ ಸಮಿತಿಯು ಪರಿಹಾರ ಘೋಷಣೆ ಮಾಡಿದೆ’ ಎಂದು ವೆಂಕಟರಮಣಿ ಅವರು ನ್ಯಾಯಪೀಠಕ್ಕೆ ಕಳೆದ ಸೋಮವಾರ ತಿಳಿಸಿದ್ದರು. ಈ ವರದಿಯ ಪ್ರತಿಯನ್ನು ಸಲ್ಲಿಸುವಂತೆ ನ್ಯಾಯಪೀಠ ಸೂಚಿಸಿತ್ತು.