ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BJP ಹಂಚಿಕೊಂಡಿರುವ ಮೀಸಲಾತಿ ವಿಡಿಯೊ ತೆಗೆದುಹಾಕಲು Xಗೆ ಚುನಾವಣಾ ಆಯೋಗ ಸೂಚನೆ

Published 7 ಮೇ 2024, 13:32 IST
Last Updated 7 ಮೇ 2024, 13:32 IST
ಅಕ್ಷರ ಗಾತ್ರ

ನವದೆಹಲಿ: ಮೀಸಲಾತಿಗೆ ಸಂಬಂಧಿಸಿದಂತೆ ಬಿಜೆಪಿಯ ಕರ್ನಾಟಕ ರಾಜ್ಯ ಘಟಕ ಹಂಚಿಕೊಂಡಿರುವ ಆಕ್ಷೇಪಾರ್ಹ ವಿಡಿಯೊವನ್ನು ತಕ್ಷಣ ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್‌’ಗೆ ಸೂಚಿಸಿದೆ.

ಬಿಜೆಪಿ ಹಂಚಿಕೊಂಡಿರುವ ಈ ಅನಿಮೇಟೆಡ್‌ ವಿಡಿಯೊ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಿಳಿಸಿದೆ.

ಈ ಸಂಬಂಧ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಎಫ್‌ಐಆರ್ ದಾಖಲಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಐಟಿ ನಿಯಮ 2021ರ ಪ್ರಕಾರ ಆಕ್ಷೇಪಾರ್ಹ ಪೋಸ್ಟ್ ಅನ್ನು ತೆಗೆದುಹಾಕಲು ಮೇ 5 ರಂದು 'ಎಕ್ಸ್' ಗೆ ಪತ್ರವನ್ನೂ ಬರೆದಿದ್ದಾರೆ ಎಂದು ಆಯೋಗ ತಿಳಿಸಿದೆ.

ಅದಾಗ್ಯೂ ಸಾಮಾಜಿಕ ಮಾಧ್ಯಮ ವೇದಿಕೆಯಿಂದ ಪೋಸ್ಟ್ ಅನ್ನು ತೆಗದುಹಾಕಿರಲಿಲ್ಲ. ಆ ಕಾರಣ ವಿಡಿಯೊವನ್ನು ತಕ್ಷಣ ತೆಗೆದುಹಾಕುವಂತೆ ಎಕ್ಸ್‌ಗೆ ಸೂಚಿಸಲಾಗಿದೆ ಎಂದು ತಿಳಿಸಿದೆ.

ಕರ್ನಾಟಕದ ಉಳಿದ 14 ಲೋಕಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಇದೇ ವೇಳೆ ವಿಡಿಯೊ ತೆಗೆದುಹಾಕುವಂತೆ ಎಕ್ಸ್‌ಗೆ ಆಯೋಗ ನಿರ್ದೇಶನ ನೀಡಿದೆ.

ಏನಿದು ವಿವಾದ?

‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳನ್ನು ಮೊಟ್ಟೆಗಳೆಂದು ಬಿಂಬಿಸಿ, ಆ ಮೊಟ್ಟೆಗಳಿರುವ ಬುಟ್ಟಿಗೆ ಮುಸ್ಲಿಂ ಮೊಟ್ಟೆಯನ್ನು ರಾಹುಲ್‌ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಂದಿರಿಸಿದ್ದಾರೆ. ಮರಿಯಾದ ಬಳಿಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಮರಿಗಳಿಗೆ ಸೇರಬೇಕಾದ ಅನುದಾನವನ್ನು ಮುಸ್ಲಿಂ ಮರಿಗಳಿಗೆ ಮಾತ್ರ ನೀಡುತ್ತಾರೆ...’ ಎಂಬ ಹೇಳಿಕೆಯಳ್ಳ ವಿಡಿಯೊ ತುಣುಕನ್ನು ಬಿಜೆಪಿಯ ಕರ್ನಾಟಕ ರಾಜ್ಯ ಘಟಕದ ‘ಎಕ್ಸ್‌’ ಖಾತೆಯಲ್ಲಿ ಶನಿವಾರ ಹಂಚಿಕೊಂಡಿತ್ತು.

ಈ ಸಂಬಂಧ ಕಾಂಗ್ರೆಸ್ ದೂರು ನೀಡಿದ್ದು, ‌ಬಿಜೆಪಿ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಘಟಕದ ಮುಖ್ತಸ್ಥ ಅಮಿತ್‌ ಮಾಳವೀಯ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT