ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯವೆಸಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ನಗರದ ಮೇಕ್ರಿ ಸರ್ಕಲ್ ಬಳಿ ಚೊಂಬು ಹಿಡಿದು ಪ್ರತಿಟನೆ ನಡೆಸಿದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿದ್ದು ಕೇವಲ ಖಾಲಿ ಚೊಂಬು!
— Karnataka Congress (@INCKarnataka) April 20, 2024
▶ ಬರ ಪರಿಹಾರ ವಿಚಾರದಲ್ಲಿ 18 ಸಾವಿರ ಕೋಟಿ ಚೊಂಬು
▶ 15ನೇ ಹಣಕಾಸು ಆಯೋಗದಿಂದ ನೀಡಬೆಕಿದ್ದ 62 ಸಾವಿರ ಕೋಟಿ ಚೊಂಬು
▶ ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಹೇಳಿ ನೀಡಿದ್ದು ಮಾತ್ರ ಚೊಂಬು
▶ ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ… pic.twitter.com/H806hAHRyI
ಬರ ಪರಿಹಾರ ನೀಡಲು ರಾಜ್ಯ ಸರ್ಕಾರ ಹಲವಾರು ಬಾರಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿತ್ತು, ಆದರೆ ಕರ್ನಾಟಕ ವಿರೋಧಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ನೀಡಿದ್ದು ಖಾಲಿ ಚೊಂಬು ಮಾತ್ರ..
— Karnataka Congress (@INCKarnataka) April 20, 2024
ಕನ್ನಡಿಗರಿಗೆ ಖಾಲಿ ಚೊಂಬು ನೀಡಿದ ಬಿಜೆಪಿ ಸರ್ಕಾರಕ್ಕೆ ಮರಳಿ ಅದೇ ಖಾಲಿ ಚೊಂಬನ್ನೇ ನೀಡುವುದು ನ್ಯಾಯಯುತ ಪರಿಹಾರ!#BJPChombuSarkara pic.twitter.com/jLK0tThIec
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಕ್ಕಿದ್ದು ಕೇವಲ ಖಾಲಿ ಚೊಂಚು ಎಂದು ಕಾಂಗ್ರೆಸ್ ನಾಯಕರು ದೂರಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಶಾಸಕ ರಿಜ್ವಾನ್ ಅರ್ಷಾದ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಇದ್ದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಎಸಗಿರುವ ನಿರಂತರ ಅನ್ಯಾಯ, ಮೋಸವನ್ನು ಖಂಡಿಸಿ ಎಐಸಿಸಿ ರಾಜ್ಯ ಉಸ್ತುವಾರಿಗಳಾದ @rssurjewala ಅವರ ನೇತೃತ್ವದಲ್ಲಿ ಮೇಖ್ರಿ ಸರ್ಕಲ್ ಬಳಿ 'ಚೊಂಬು' ಹಿಡಿದು ಕೇಂದ್ರದಿಂದ ರಾಜ್ಯಕ್ಕೆ ಸಿಕ್ಕಿದ್ದು ಕೇವಲ ಖಾಲಿ ಚೊಂಬು ಎಂಬ ವಿನೂತನ ಪ್ರತಿಭಟನೆ ನಡೆಸಲಾಯಿತು.
— Karnataka Congress (@INCKarnataka) April 20, 2024
ಎಐಸಿಸಿ… pic.twitter.com/anl752GaHU
ಈ ಬಗ್ಗೆ ರಣದೀಪ್ ಸಿಂಗ್ ಸುರ್ಜೇವಾಲ ಅವರೂ ಕನ್ನಡದಲ್ಲಿ ಟ್ವೀಟ್ ಮಾಡಿದ್ದು, ಬಿಜೆಪಿ ಪಕ್ಷಕ್ಕೆ ಈ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 6.5 ಕೋಟಿ ಕನ್ನಡಿಗರು ಚೊಂಬನ್ನು ನೀಡಿ ಮನೆಗೆ ಕಳುಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಮೋದಿ ಮತ್ತು ಬಿಜೆಪಿಯವರು ಕರುನಾಡಿನ ಜನತೆಗೆ #BJPSarakaraChombu ಕೊಟ್ಟಿದ್ದಾರೆ.
— Randeep Singh Surjewala (@rssurjewala) April 20, 2024
👉ಬರ ಪರಿಹಾರ ವಿಚಾರದಲ್ಲಿ 18 ಸಾವಿರ ಕೋಟಿ ಚೊಂಬು
👉15ನೇ ಹಣಕಾಸು ಆಯೋಗದಿಂದ ನೀಡಬೆಕಿದ್ದ 62 ಸಾವಿರ ಕೋಟಿ ಚೊಂಬು
👉ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಹೇಳಿ ನೀಡಿದ್ದು ಮಾತ್ರ ಚೊಂಬು
👉ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದು… pic.twitter.com/eKHL7szBAH
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.