ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪೆನ್ ಡ್ರೈವ್ ಹಂಚಿಕೆ ಸಂಬಂಧ ಜೆಡಿಎಸ್ ಜಿಲ್ಲಾ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ಅವರು, ಆರೋಪಿಗಳಾದ ನವೀನ್ ಗೌಡ, ಕಾರ್ತಿಕ್, ಪುಟ್ಟರಾಜು, ಚೇತನ್, ಕ್ವಾಲಿಟಿ ಬಾರ್ ಶರತ್ ಸೇರಿ ಐವರ ವಿರುದ್ಧ ದೂರು ನೀಡಿದ್ದರು. ದೂರು ದಾಖಲಾಗಿ 15 ದಿನ ಕಳೆದರೂ ಏಕೆ ಅವರನ್ನು ಬಂಧಿಸಿಲ್ಲ’ ಎಂದು ಪ್ರಶ್ನಿಸಿದರು.