ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ: ಆರ್‌. ಆಶೋಕ ವಾಗ್ದಾಳಿ

Published 28 ಏಪ್ರಿಲ್ 2024, 6:48 IST
Last Updated 28 ಏಪ್ರಿಲ್ 2024, 6:48 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸುಳ್ಳುರಾಮಯ್ಯ ಎಂದು ವಿರೋಧ ಪಕ್ಷದ ನಾಯಕ ಆರ್‌. ಆಶೋಕ ಕರೆದರು.

ಅವರು ಪ್ರತಿದಿನ ಸುಳ್ಳು ಹೇಳುತ್ತಿದ್ದಾರೆ. ಈ ಹಿಂದೆ ಕೇಂದ್ರದಿಂದ ₹4,860 ಕೋಟಿ ಬರಪರಿಹಾರ ಕೇಳಿದ್ದಾಗಿ ಹೇಳಿದ್ದರು. ಈಗ ₹18,108 ಕೋಟಿ ಪರಿಹಾರದ ಬೇಡಿಕೆ ಇಟ್ಟಿದ್ದಾರೆ ಎಂದು ಅವರು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರನ್ನೂ ಸುಳ್ಳುಗಾರ ಎಂದು ಛೇಡಿಸಿದ ಅವರು, ಇಬ್ಬರೂ ‍ಪ್ರತಿದಿನ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

ಕೇಂದ್ರ ಸರ್ಕಾರ ನಿಯಮಗಳಿಗೆ ಅನುಗುಣವಾಗಿಯೇ ಹಣ ಬಿಡುಗಡೆ ಮಾಡಿದೆ. ಕರ್ನಾಟಕ ಮಾತ್ರವಲ್ಲ ತಮಿಳುನಾಡು ಹಾಗೂ ಅಸ್ಸಾಂಗೂ ಪರಿಹಾರ ಬಿಡುಗಡೆ ಮಾಡಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT