ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸ್ವಚ್ಛವಾಗಬೇಕಿರುವುದು ಸಚಿವ ಹೆಗಡೆ ಮಿದುಳು’

ಕೇಂದ್ರ ಸರ್ಕಾರಕ್ಕೆ ಫಿನಾಯಿಲ್‌, ಪೊರಕೆ ರವಾನೆ
Last Updated 29 ಜನವರಿ 2018, 19:30 IST
ಅಕ್ಷರ ಗಾತ್ರ

ಕೂಡ್ಲಿಗಿ (ಬಳ್ಳಾರಿ ಜಿಲ್ಲೆ): ‘ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಮಿದುಳು ಹಾಗೂ ಹೃದಯದಲ್ಲಿ ತುಂಬಿಕೊಂಡಿರುವ ಮಲವನ್ನು ಸ್ವಚ್ಛಗೊಳಿಸಬೇಕು’ ಎಂದು ಆಗ್ರಹಿಸಿ, ವಿವಿಧ ದಲಿತಪರ ಸಂಘಟನೆಗಳ ಸದಸ್ಯರು ಸೋಮವಾರ ಕೇಂದ್ರ ಸರ್ಕಾರಕ್ಕೆ ಫಿನಾಯಿಲ್‌ ಹಾಗೂ ಪೊರಕೆಗಳನ್ನು ರವಾನಿಸಿದರು.

ತಹಶೀಲ್ದಾರ್ ಕಚೇರಿಯಲ್ಲಿ ಮನವಿ ಸಲ್ಲಿಸಿದ ಡಾ. ಬಿ.ಆರ್‌. ಅಂಬೇಡ್ಕರ್‌ ಯುವ ಸೇನೆ, ಮಾದಿಗ ದಂಡೋರ ಹೋರಾಟ ಸಮಿತಿ ಹಾಗೂ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು, ‘ಸಂವಿಧಾನ ಹಾಗೂ ದಲಿತರ ಬಗ್ಗೆ ಸಚಿವ ಹೆಗಡೆ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಕೋಮುಗಲಭೆ ಸೃಷ್ಟಿಸುವುದು ಅವರ ಮೂಲ ಉದ್ದೇಶವಾಗಿದೆ’ ಎಂದರು.

‘ಈ ದೇಶವನ್ನು ಸ್ವಚ್ಛ ಮಾಡುವವರು ದಲಿತ ಪೌರ ಕಾರ್ಮಿಕರು. ಮೂರು ತಿಂಗಳಾದರೂ ಸಂಬಳ ಸಿಗದೆ ಅವರು ಪರದಾಡುವ ಸ್ಥಿತಿಯಲ್ಲಿದ್ದಾರೆ. ಆದರೆ, ಈಗ ನಿಜವಾಗಿ ಸ್ವಚ್ಛಗೊಳಿಸಬೇಕಾಗಿರುವುದು ಮನುಸಂಸ್ಕೃತಿಯನ್ನು ಜಪಿಸುತ್ತ, ಅಸ್ಪೃಶ್ಯತೆಯನ್ನು ಜೀವಂತ ಇಡುತ್ತಿರುವವರ ನಾಲಿಗೆ ಹಾಗೂ ಹೃದಯವನ್ನು’ ಎಂದು ಅಂಬೇಡ್ಕರ್‌ ಯುವ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಪಿ. ಸಂತೋಷ್ ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT