ಜೆಡಿಎಸ್ ಇಡೀ ರಾಜ್ಯದಾದ್ಯಂತ ಬಲಿಷ್ಠವಾಗಿದ್ದು, ಯಾವುದೇ ಪಕ್ಷದ ಸಹಾಯವಿಲ್ಲದೇ ಸರ್ಕಾರ ರಚಿಸಲಿದ್ದು, ಜಿಲ್ಲೆಯಲ್ಲಿ ಮುದ್ದೇಬಿಹಾಳ, ಸಿಂದಗಿ, ನಾಗಠಾಣ, ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ ಜೆಡಿಎಸ್ ಎಲ್ಲ ಪಕ್ಷಕ್ಕಿಂತಲೂ ಮುಂದಿದೆ. ಇನ್ನುಳಿದ ನಾಲ್ಕು ಕ್ಷೇತ್ರಗಳಲ್ಲಿಯೂ ಪಕ್ಷ ಮುಂಚೂಣಿ ಬರುವಂತೆ ಸಿದ್ಧತೆ ನಡೆದಿದೆ ಎಂದರು.