ಹರಿಹರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿಯ ಕಳಸಾ–ಬಂಡೂರಿ ಯೋಜನೆ ಕಾಮಗಾರಿ ಸ್ಥಳಕ್ಕೆ ಭಾನುವಾರ ಗೋವಾ ಸ್ಪೀಕರ್ ಪ್ರಮೋದ್ ಸಾವಂತ ನೇತೃತ್ವದ ತಂಡ ಭೇಟಿ ನೀಡಿದೆ. ಇದನ್ನು ಗಮನಿಸಿದರೆ ಕರ್ನಾಟಕ ವಿರೋಧಿ ನಿಲುವು ತಳೆದರೂ ಯಾರೂ ಪ್ರಶ್ನಿಸುವುದಿಲ್ಲ ಎಂಬ ಮನೋಭಾವ ಗೋವಾ ಹಾಗೂ ಕೇಂದ್ರ ಸರ್ಕಾರಕ್ಕೆ ಇದ್ದಂತೆ ಕಾಣುತ್ತಿದೆ’ ಎಂದರು.