ಮುಂಬೈ: ಮಧ್ಯಪ್ರಾಚ್ಯ ಬಿಕ್ಕಟ್ಟು ಹಾಗೂ ಪ್ರತಿಕೂಲ ಹವಾಮಾನವು ದೇಶದಲ್ಲಿ ಹಣದುಬ್ಬರದ ಏರಿಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಮಂಗಳವಾರ ಬಿಡುಗಡೆಯಾಗಿರುವ ಭಾರತೀಯ ರಿಸರ್ವ್ ಬ್ಯಾಂಕ್ನ ಮಾಸಿಕ ವರದಿ ತಿಳಿಸಿದೆ.
ಬಿಸಿ ಗಾಳಿಯು ತರಕಾರಿಗಳ ಬೆಲೆ ಏರಿಕೆಗೆ ಕಾರಣವಾಗಲಿದೆ. ಮತ್ತೊಂದೆಡೆ ಇಸ್ರೇಲ್–ಇರಾನ್ ನಡುವಿನ ಬಿಕ್ಕಟ್ಟಿನಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅಸ್ಥಿರವಾಗಿದೆ. ತೈಲದ ಬೆಲೆ ಏರಿಕೆಯಾದರೆ ಹಣದುಬ್ಬರವು ಹೆಚ್ಚಳವಾಗಲಿದೆ ಎಂದು ಹೇಳಿದೆ.
ಮಾರ್ಚ್ನಲ್ಲಿ ಗ್ರಾಹಕ ಬೆಲೆ ಸೂಚ್ಯಂಕ ಆಧರಿಸಿದ ಚಿಲ್ಲರೆ ಹಣದುಬ್ಬರವು ಶೇ 4.9ರಷ್ಟು ದಾಖಲಾಗಿದೆ. ಕಳೆದ ಎರಡು ತಿಂಗಳಿನಿಂದಲೂ ಸರಾಸರಿ ಹಣದುಬ್ಬರವು ಶೇ 5.1ರಷ್ಟಿದೆ.
ಜಾಗತಿಕ ಬೆಳವಣಿಗೆಯ ವೇಗವು ಸುಸ್ಥಿರವಾಗಿದ್ದು, ವ್ಯಾಪಾರ ವಹಿವಾಟು ಸಕಾರಾತ್ಮಕವಾಗಿದೆ ಎಂದು ವರದಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.