ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೆಪ್ಟೆಂಬರ್ 7ರಿಂದ 11 ರವರೆಗೆ ಜಿ20 ಶೃಂಗಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಪ್ರಯಾಣಿಕರಿಗೆ ಕೆಲವೊಂದು ನಿರ್ಬಂಧಗಳನ್ನು ವಿಧಿಸಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಮಾಹಿತಿ ನೀಡಿರುವ ಏರ್ ಇಂಡಿಯಾ, ‘ಸೆ.7ರಿಂದ ಸೆ.11ರ ನಡುವೆ ಬೇರೆ ನಗರಗಳಿಂದ ದೆಹಲಿಗೆ ಅಥವಾ ದೆಹಲಿಯಿಂದ ಬೇರೆ ಕಡೆ ಪ್ರಯಾಣಿಸಲು ಈಗಾಗಲೇ ಟಿಕೆಟ್ ಬುಕ್ ಮಾಡಿರುವ ಪ್ರಯಾಣಿಕರಿಗೆ ಅನ್ವಯವಾಗುವ ಶುಲ್ಕಗಳಲ್ಲಿ ಒಂದು ಬಾರಿ ವಿನಾಯಿತಿ ನೀಡಲಾಗುವುದು’ ಎಂದು ತಿಳಿಸಿದೆ.
ಒಂದು ವೇಳೆ ಪ್ರಯಾಣಿಕರು ತಮ್ಮ ಪ್ರಯಾಣದ ದಿನಾಂಕವನ್ನು ಬದಲಾಯಿಸಲು ಬಯಸಿದರೆ. ಮರುನಿಗದಿಗೊಳಿಸಿದ ವಿಮಾನದ ದರ ವ್ಯತ್ಯಾಸವಿದ್ದರೂ ಹಳೆಯ ದರ ಅನ್ವಯಿಸುತ್ತದೆ ಎಂದು ಏರ್ ಇಂಡಿಯಾ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.