ಬೆಂಗಳೂರು: ತಮಿಳುನಾಡಿನಲ್ಲಿ ಮುಂದಿನ ಐದು ವರ್ಷಗಳಲ್ಲಿ ₹1 ಸಾವಿರ ಕೋಟಿ ಹೂಡಿಕೆಗೆ ರಾಮ್ರಾಜ್ ಕಾಟನ್ ಸಂಸ್ಥೆ ಮುಂದಾಗಿದೆ.
ಚೆನ್ನೈನಲ್ಲಿ ಇತ್ತೀಚೆಗೆ ನಡೆದ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸಂಸ್ಥೆಯ ಸಂಸ್ಥಾಪಕ ನಾಗರಾಜನ್ ಅವರು, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಸಮ್ಮುಖದಲ್ಲಿ ಈ ಕುರಿತ ಒಪ್ಪಂದಕ್ಕೆ ಸಹಿ ಹಾಕಿದರು.
ನೂಲುವ ಹಾಗೂ ನೇಯ್ಗೆ ಸಂಸ್ಕರಣಾ ಘಟಕ ಸ್ಥಾಪನೆಗಾಗಿ ಬಂಡವಾಳವನ್ನು ವಿನಿಯೋಗಿಸಲಾಗುತ್ತಿದೆ. ಇದರಿಂದ 5 ಸಾವಿರ ಉದ್ಯೋಗ ಸೃಷ್ಟಿಯಾಗಲಿವೆ ಎಂದು ಸಂಸ್ಥೆ ತಿಳಿಸಿದೆ.
‘ಈ ಬಂಡವಾಳ ಹೂಡಿಕೆಯಿಂದಾಗಿ ಸಾವಿರಾರು ನೇಕಾರರಿಗೆ ಉದ್ಯೋಗ ದೊರೆಯಲಿದೆ. ಕೈಗಾರಿಕಾ ಅಭಿವೃದ್ಧಿಯ ನೆಲೆಗಟ್ಟಿನಲ್ಲಿ ತಮಿಳುನಾಡು ಪ್ರಗತಿ ಪಥದಲ್ಲಿ ಸಾಗಲು ಸಮಾವೇಶವು ಸಹಕಾರಿಯಾಗಿದೆ’ ಎಂದು ನಾಗರಾಜನ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.