ಮುಂಬೈ: ಪ್ಯಾರಿಸ್ನಿಂದ ಮುಂಬೈಗೆ ಆಗಮಿಸುತ್ತಿದ್ದ ವಿಸ್ತಾರಾ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿದ್ದರಿಂದ ಮುಂಬೈನ ವಿಮಾನ ನಿಲ್ದಾಣದಲ್ಲಿ ಭಾನುವಾರ ತುರ್ತು ಪರಿಸ್ಥಿತಿ ಘೋಷಿಸಲಾಯಿತು.
ಬೆಳಿಗ್ಗೆ 10.19ಕ್ಕೆ ಈ ವಿಮಾನವು ಭೂ ಸ್ಪರ್ಶ ಮಾಡಿತು. ಬಳಿಕ ಅದರಲ್ಲಿದ್ದ 294 ಪ್ರಯಾಣಿಕರು ಮತ್ತು 12 ಸಿಬ್ಬಂದಿಯನ್ನು ಸುರಕ್ಷಿತವಾಗಿ ಇಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಪ್ಯಾರಿಸ್ನ ಚಾರ್ಲ್ಸ್ ಡಿ ಗಾಲ್ ವಿಮಾನ ನಿಲ್ದಾಣದಿಂದ ಮುಂಬೈಗೆ ಬರುತ್ತಿದ್ದ ಈ ವಿಮಾನದಲ್ಲಿನ (ಯುಕೆ 024) ಏರ್ಸಿಕ್ನೆಸ್ ಬ್ಯಾಗ್ನಲ್ಲಿ ಬಾಂಬ್ ಬೆದರಿಕೆ ಪತ್ರ ಸಿಕ್ಕಿದೆ.
ಈ ಬಗ್ಗೆ ವಿಮಾನಯಾನ ಸಂಸ್ಥೆಯು ಸಂಬಂಧಪಟ್ಟ ಪ್ರಾಧಿಕಾರಕ್ಕೆ ಮಾಹಿತಿ ನೀಡಿದೆ. ಭದ್ರತಾ ಏಜೆನ್ಸಿಗಳ ಪರಿಶೀಲನೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.