ಲೋಕಾಪುರ: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ದಗಿತಗೊಂಡಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಲೋಕಸಭೆಯ ಬಿಜೆಪಿ ಅಭ್ಯರ್ಥಿ ಪರವಾಗಿ ಮತಯಾಚಿಸಿ ಅವರು ಮಾತನಾಡಿದರು. ‘ಹಿಂದುಳಿದವರ ಏಳಿಗೆಗೆ ಇಟ್ಟ ಹಣವನ್ನು ಗ್ಯಾರಂಟಿಗೆ ಖರ್ಚು ಮಾಡುವ ಮೂಲಕ ಜನರಿಗೆ ವಂಚಿಸಿದ್ದಾರೆ. ವಿದ್ಯಾರ್ಥಿಗಳಿಗೆ ಕೋಡಬೇಕಾದ ಪ್ರೋತ್ಸಾಹ ಹಣ ಕೂಡ ಕೋಡುತ್ತಿಲ್ಲ. ಇದು ಕೇವಲ ಬಂಡಲ ಸರ್ಕಾರವಾಗಿದೆ. ಜನರಿಗೆ ಮೋಸಮಾಡುವುದು ಸಿದ್ದರಾಮಯ್ಯನವರ ಗುರಿಯಾಗಿದೆ. ಕೇಂದ್ರ ಸರ್ಕಾರ 5 ಕೆ.ಜಿ ಅಕ್ಕಿ ನೀಡುತ್ತಿದ್ದು ರಾಜ್ಯ ಸರ್ಕಾರ ನಾವು ನೀಡುತ್ತಿರುವುದಾಗಿ ಸುಳ್ಳು ಹೇಳುತ್ತಿದ್ದಾರೆ’ ಎಂದರು.
ಮುಖಂಡರಾದ ಅರುಣ ಕಾರಜೋಳ, ವಿ.ಎಂ.ತೆಗ್ಗಿ, ಲೋಕಣ್ಣ ಕತ್ತಿ, ಪಿಕೆಪಿಎಸ್ ಅಧ್ಯಕ್ಷ ಹೊಳಬಸು ಕಾಜಗಾರ, ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸಂಗಣ್ಣ ಕಾತರಕಿ, ವೀರೇಶ ಪಂಚಕಟ್ಟಿಮಠ, ಸಂತೋಷ ದೇಶಪಾಂಡೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.