ADVERTISEMENT

ನೀಟ್–ಬೇಕೇ? ಬೇಡವೇ ಚರ್ಚೆಯಾಗಲಿ: ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 28 ಜೂನ್ 2024, 8:35 IST
Last Updated 28 ಜೂನ್ 2024, 8:35 IST
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್   

ಬಾಗಲಕೋಟೆ: ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅವ್ಯವಹಾರ ನೋಡಿದರೆ‌ ರಾಜ್ಯಕ್ಕೆ ನೀಟ್ ಬೇಕೇ, ಬೇಡವೇ ಎಂಬ ವ್ಯಾಪಕ ಚರ್ಚೆಯಾಗಬೇಕಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ‌ಭಾರತದ‌ ರಾಜ್ಯಗಳಲ್ಲಿ ಅವ್ಯವಹಾರ ನಡೆದಿದೆ. ಪರೀಕ್ಷೆಗಳು ಹೀಗಾದರೆ ಮಕ್ಕಳ ಭವಿಷ್ಯ‌ ಏನು ಎಂದು ಪ್ರಶ್ನಿಸಿದರು.

ನೀಟ್‌ ಪರೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ತೊಂದರೆಯಾಗುತ್ತಿದೆ. ಪರೀಕ್ಷೆ ನಡೆಸುವ ಪ್ರಕ್ರಿಯೆ ಮೇಲೆ ಪ್ರಶ್ನೆಗಳು ಹುಟ್ಟಿಕೊಂಡಿವೆ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.