ADVERTISEMENT

ಕುಡಿಯುವ ನೀರಿನ ಸಮಸ್ಯೆ: ಕಳಸಕೊಪ್ಪ ಗ್ರಾಮಕ್ಕೆ ಅಧಿಕಾರಿಗಳ ಭೇಟಿ

​ಪ್ರಜಾವಾಣಿ ವಾರ್ತೆ
Published 20 ಮೇ 2024, 14:16 IST
Last Updated 20 ಮೇ 2024, 14:16 IST
ಕಲಾದಗಿ ಸಮೀಪದ ಕಳಸಕೊಪ್ಪ ಗ್ರಾಮಕ್ಕೆ ಭಾನುವಾರ ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಭೇಟಿ ನೀಡಿದರು
ಕಲಾದಗಿ ಸಮೀಪದ ಕಳಸಕೊಪ್ಪ ಗ್ರಾಮಕ್ಕೆ ಭಾನುವಾರ ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಭೇಟಿ ನೀಡಿದರು   

ಕಲಾದಗಿ: ಸಮೀಪದ ಕಳಸಕೊಪ್ಪ ಗ್ರಾಮದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಇರುವುದನ್ನು ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಪರಿಶೀಲಿಸಿದರು.

ಗ್ರಾಮದಲ್ಲಿನ ಕೊಳವೆಬಾವಿಗಳು ಬತ್ತಿ ಹೋಗಿದ್ದು, ಕೂಡಲೇ ಹೊಸ ಕೊಳವೆಬಾವಿ ಕೋರಿಯಿಸಲು ಸ್ಥಳದಲ್ಲಿದ್ದ ಎಂಜಿನಿಯರ್ ಚಿದಾನಂದ ಭಜಂತ್ರಿ ಅವರಿಗೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ ಸೂಚಿಸಿದರು.

ತಹಶೀಲ್ದಾರ್ ಅಮರೇಶ ಪಮ್ಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ.ದುಂಡಪ್ಪ. ನಾಯ್ಕರ, ಗ್ರಾಮ ಆಡಳಿತ ಅಧಿಕಾರಿ ರವಿಕುಮಾರ ಕುಳ್ಳೊಳ್ಳಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.