ಲೋಕಾಪುರ: ಆಸ್ತಿ ವಿಚಾರಕ್ಕೆ ಉಂಟಾದ ವೈಮನಸ್ಸಿನಿಂದ ಅಣ್ಣನನ್ನೇ ಕೊಲೆ ಮಾಡಿದ ಘಟನೆ ಮುಧೋಳ ತಾಲ್ಲೂಕಿನ ಜಾಲಿಬೇರಿ ಗ್ರಾಮದಲ್ಲಿ ಸೋಮವಾರ ಜರುಗಿದೆ.
ಉತ್ತಮ ದಶರಥ ಯಾದವ್ ( 53 )ಕೊಲೆಯಾದವರು. ಆನಂದ ದಶರಥ ಯಾದವ್ ಆರೋಪಿ. ಉತ್ತಮ ಅವರು ಬೆಳಿಗ್ಗೆ ಜಮೀನಿಗೆ ಹೋರಟಾಗ ಆನಂದ ಅಡ್ಡಗಟ್ಟಿ ಕೊಡಲಿಯಿಂದ ಕುತ್ತಿಗೆಗೆ ಬಲವಾಗಿ ಹೊಡೆದು ಕೊಲೆ ಮಾಡಿರುವುದಾಗಿ ಮೃತರ ಪತ್ನಿ ದೂರು ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.