ಜಮಖಂಡಿ: ‘ಲೋಕಸಭೆ ಚುಣಾವಣೆ ಟಿಕೆಟ್ಗಾಗಿ ನಾನು ಅರ್ಜಿ ಹಾಕಿರಲಿಲ್ಲ, ಲೋಕಸಭೆ ಚುಣಾವಣೆ ಮೇಲೆ ನನಗೆ ಆಸಕ್ತಿ ಇಲ್ಲ, ಬಾಗಲಕೋಟೆ ಮುಖಂಡರು ನಾನು ಸೂಕ್ತ ಅಭ್ಯರ್ಥಿಯಾಗುತ್ತೇನೆಡ ಎಂದು ನಾಯಕರಿಗೆ ಹೇಳಿದ ಪರಿಣಾಮ ರಾಜ್ಯ ಮತ್ತು ರಾಷ್ಟ್ರ ನಾಯಕರು ಚುಣಾವಣೆಗೆ ತಯಾರಾಗಲು ಒತ್ತಾಯ ಮಾಡಿದ್ದರು. ಹಲವು ಬಾರಿ ಕರೆಯಿಸಿ ಮಾತನಾಡಿದ್ದಾರೆ. ಆದರೆ ನಾನು ನಿರಾಕರಿಸಿದ್ದೇನೆ’ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ನನ್ನ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರನ್ನು ವಿಚಾರಿಸಿ ಹೇಳುವುದಾಗಿ ತಿಳಿಸಿದ್ದೆ. ಕಾಂಗ್ರೆಸ್ ಪಕ್ಷ ಯಾರನ್ನೇ ಅಭ್ಯರ್ಥಿಯಾಗಿ ಘೋಷಿಸಿದರೂ ಗೆಲ್ಲಿಸುವೆ. ಪಕ್ಷದ ತೀರ್ಮಾನಕ್ಕೆ ಬದ್ಧ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.