ಜಮಖಂಡಿ: ಇಲ್ಲಿನ ಬೀದಿಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಶಾಶ್ವತ ಸ್ಥಳ ನೀಡಬೇಕೆಂದು ಹನುಮಾನ ಚೌಕದ ಬಳಿ ಸ್ಥಳೀಯ ವ್ಯಾಪಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು.
ನಿತ್ಯ ನಗರಸಭೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಂದ ನಮಗೆ ತೊಂದರೆಯಾಗುತ್ತಿದೆ. ನಮ್ಮ ವ್ಯಾಪಾರ ವಹಿವಾಟಗಳನ್ನು ಬೀದಿಬದಿಯಲ್ಲಿ ಮಳೆ, ಬಿಸಿಲು ಎನ್ನದೆ ಹೊಟ್ಟೆಪಾಡಿಗಾಗಿ ಕುಳಿತು ವ್ಯಾಪಾರ ಮಾಡುತ್ತೇವೆ. ಆದರೆ ನಮ್ಮಿಂದ ಯಾವುದೇ ಟ್ರಾಫಿಕ್ ತೊಂದರೆ ಇಲ್ಲ. ಆದರೆ ನಗರಸಭೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಬಂದು ನಮ್ಮ ವ್ಯಾಪಾರದ ಸಮಯದಲ್ಲಿ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ನಗರದ ಹಳೇ ಜೈಲಿನಲ್ಲಿ ವ್ಯಾಪಾರಕ್ಕೆ ಸ್ಥಳ ಇದೆ. ಅದನ್ನು ಸ್ವಚ್ಛಗೊಳಿಸಿ ನೀಡಬೇಕು. ಬೀದಿಬದಿ ವ್ಯಾಪಾರಿಗಳಿಂದ ಪ್ರತಿ ದಿನ ಚಂದಾ ತೆಗೆದುಕೊಳ್ಳುತ್ತಾರೆ. ಆದರೆ ನಮಗೆ ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ, ಆದ್ದರಿಂದ ಶಾಶ್ವತವಾದ ಸ್ಥಳ ನಿಗದಿ ಮಾಡಬೇಕು ಬೀದಿ ಬದಿ ವ್ಯಾಪಾರಸ್ಥರು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.