ADVERTISEMENT

ಲಿಂಗಾಯತ ಒಳ ಪಂಗಡಗಳ ಸಭೆ ಜ.27ಕ್ಕೆ ದಾವಣಗೆರೆಯಲ್ಲಿ

‘ಪಂಚಸಂಗಮ ಸಭೆ’ಯಲ್ಲಿ ನಿರ್ಣಯ

​ಪ್ರಜಾವಾಣಿ ವಾರ್ತೆ
Published 14 ಜನವರಿ 2024, 19:50 IST
Last Updated 14 ಜನವರಿ 2024, 19:50 IST
ಬಸವಜಯಮೃತ್ಯುಂಜಯ ಸ್ವಾಮೀಜಿ
ಬಸವಜಯಮೃತ್ಯುಂಜಯ ಸ್ವಾಮೀಜಿ   

ಕೂಡಲಸಂಗಮ (ಬಾಗಲಕೋಟೆ ಜಿಲ್ಲೆ): ಲಿಂಗಾಯತ ಒಳ ಪಂಗಡಗಳ ದುಂಡು ಮೇಜಿನ ಪೂರ್ವಭಾವಿ ಸಭೆಯನ್ನು ಜನವರಿ 27 ಮತ್ತು 28 ರಂದು ದಾವಣಗೆರೆಯಲ್ಲಿ ನಡೆಸಲು ನಿರ್ಣಯಿಸಲಾಗಿದೆ.

ಪಂಚಮಸಾಲಿ ಪಾದಯಾತ್ರೆಯ ತೃತೀಯ ವರ್ಷಾಚರಣೆಯ ಅಂಗವಾಗಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಭಾನುವಾರ ನಡೆದ 2ಎ ಮೀಸಲಾತಿ ಚಳವಳಿಗಾರರ ‘ಪಂಚಸಂಗಮ ಸಭೆ’ಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಲೋಕಸಭಾ ಚುಣಾವಣೆ ಪೂರ್ವದಲ್ಲಿ ಬೆಂಗಳೂರು ಅಥವಾ ದಾವಣಗೆರೆಯಲ್ಲಿ ಸಮಾರಂಭ ಆಯೋಜಿಸಿ 10 ಲಕ್ಷ ಜನರ ಶಕ್ತಿ ಪ್ರದರ್ಶನ ಮಾಡುವುದು.  2ಎ ಮೀಸಲಾತಿಗಾಗಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕಾಂಗ್ರೆಸ್‌ ಪಕ್ಷದ ವರಿಷ್ಠರನ್ನು ಭೇಟಿ ಮಾಡಲು ನಿಯೋಗ ತೆಗೆದುಕೊಂಡು ಹೋಗುವ ಜವಾಬ್ದಾರಿಯನ್ನು ಶಾಸಕ ವಿನಯ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ, ಬಿ.ಆರ್.ಪಾಟೀಲ ಅವರಿಗೆ ನೀಡುವಂತೆ ನಿರ್ಣಯ ತೆಗೆದುಕೊಳ್ಳಲಾಗಿದೆ.

ADVERTISEMENT

‘ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಸಚಿವ ಸಂಪುಟದಲ್ಲಿ ನಿರ್ಣಯಿಸಿ, ಸರ್ಕಾರ ಘೋಷಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಿರುವುದಾಗಿ ಸ್ವಾಮೀಜಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.