ADVERTISEMENT

ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸಿ: ಗುರುಪ್ರಸಾದ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 13:16 IST
Last Updated 23 ಏಪ್ರಿಲ್ 2024, 13:16 IST
ಮಹಾಲಿಂಗಪುರ ಸಮೀಪದ ಢವಳೇಶ್ವರ ಗ್ರಾಮದ ಢವಳನಾಥ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಬಾಲಕಿಯರ ಸುಮೇಧಾ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭದಲ್ಲಿ ಗುರುಪ್ರಸಾದ ಸ್ವಾಮೀಜಿ ಮಾತನಾಡಿದರು
ಮಹಾಲಿಂಗಪುರ ಸಮೀಪದ ಢವಳೇಶ್ವರ ಗ್ರಾಮದ ಢವಳನಾಥ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಬಾಲಕಿಯರ ಸುಮೇಧಾ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭದಲ್ಲಿ ಗುರುಪ್ರಸಾದ ಸ್ವಾಮೀಜಿ ಮಾತನಾಡಿದರು   

ಮಹಾಲಿಂಗಪುರ: ‘ಭಾರತೀಯ ಸಂಸ್ಕೃತಿ ಅದ್ಭುತವಾಗಿದ್ದು, ಅದನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕಿದೆ’ ಎಂದು ಮೈಗೂರಿನ ಶಿವಾನಂದಮಠದ ಗುರುಪ್ರಸಾದ ಸ್ವಾಮೀಜಿ ಹೇಳಿದರು.

ಸಮೀಪದ ಢವಳೇಶ್ವರ ಗ್ರಾಮದ ಢವಳನಾಥ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಬಾಲಕಿಯರ ಸುಮೇಧಾ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಬಾಲ್ಯವನ್ನು ತಾಯಿ ರಕ್ಷಣೆ ಮಾಡಬೇಕು. ಯೌವನದಲ್ಲಿ ದಾರಿ ತಪ್ಪುವ ಸಂದರ್ಭದಲ್ಲಿ ಮಹಾತ್ಮರು ಒಳ್ಳೆಯ ಬೋಧನೆ ಮಾಡಬೇಕು. ತಾರುಣ್ಯ ತುಂಬಿದ ಯುವಕರನ್ನು ಸಂಸ್ಕೃತಿಯತ್ತ ಒಯ್ಯಬೇಕು. ಮುಪ್ಪಿನಲ್ಲಿ ಪರಮಾತ್ಮ ರಕ್ಷಣೆ ಮಾಡಬೇಕು ಎಂದರು.

ADVERTISEMENT

ಬೆಳಗಾವಿ ವಿಭಾಗ ಕಾರ್ಯವಾಹ ರಾಮಚಂದ್ರ ಏಡಕೆ ಮಾತನಾಡಿ, ನಾವೆಲ್ಲರೂ ಇನ್ನಷ್ಟು ವರ್ಷ ಬದುಕಬೇಕಿದೆ. ಹೀಗಾಗಿ, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಕೇವಲ ಓದು ಜೀವನವಲ್ಲ, ಸಾಮಾನ್ಯ ಜ್ಞಾನ ಬರಲು ಮನೆ ಬಿಟ್ಟು ಹೊರಗಿರಬೇಕು ಎಂದರು.

ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವೇಮನ್ ಗಿರಡ್ಡಿ, ಕೆ.ಜಿ.ನೇಗಿನಹಾಳ, ಸಿ.ವಿ.ದಾದನಟ್ಟಿ, ಪೂರ್ಣೇಶ ಮಠಪತಿ, ಪ್ರಮೋದ ಜಿ., ನಾರಾಯಣ ಚನ್ನಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.