ಬಾಗಲಕೋಟೆ: ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ಕೆಲವಡಿ ಮತ್ತು ಹಂಗರಗಿ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಕುರೇರ ಭೇಟಿ ನೀಡಿ, ಪರಿಶೀಲಿಸಿದರು.
ಕೂಲಿ ಕಾರ್ಮಿಕರ ಜೊತೆ ಮಾತನಾಡಿ, ಸಮಯಕ್ಕೆ ಸರಿಯಾಗಿ ಕೂಲಿ ಜಮೆಯಾಗುತ್ತಿದೆ ಎಂಬ ಮಾಹಿತಿ ಪಡೆದುಕೊಂಡರು. ಕೂಲಿ ಕಾರ್ಮಿಕ ಹಾಜರಾತಿ ಸಹ ಪರಿಶೀಲಿಸಿದರು. ಅಲ್ಲದೇ ಅರಣ್ಯ ಇಲಾಖೆಯಿಂದ ಹಮ್ಮಿಕೊಂಡಿರುವ ಸಸಿ ನೆಡುವ ಕಾಮಗಾರಿ ವೀಕ್ಷಿಸಿದರು.
ಗುಳೇದಗುಡ್ಡ ತಾಲ್ಲೂಕಿನ ಕೆಲವಡಿ, ಲಿಂಗಾಪೂರ, ಹಂಗರಗಿಯಲ್ಲಿ ಸಸಿ ನೆಡುವ ಕಾಮಗಾರಿ, ಬಾದಾಮಿ ತಾಲ್ಲೂಕಿನ ಕೆಂದೂರ, ಮಹಾಕೂಟ–ಮೊರಮ್ ರಸ್ತೆ ಕಾಮಗಾರಿ, ಬನಶಂಕರಿಯಲ್ಲಿ ಸಾಮಾಜಿಕ ಅರಣ್ಯ ವಿಭಾಗದಿಂದ ನಡೆದಿರುವ ನರ್ಸರಿ ಕಾಮಗಾರಿ ಪರಿಶೀಲನೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.