ADVERTISEMENT

ಬೆತ್ತಲೆ ಸ್ಥಿತಿಯಲ್ಲಿ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2016, 5:08 IST
Last Updated 31 ಆಗಸ್ಟ್ 2016, 5:08 IST

ಬಳ್ಳಾರಿ: ಇಲ್ಲಿನ ಕಪ್ಪಗಲ್ಲು ಬಳಿಯ ತುಂಗಭದ್ರಾ ಉಪ ಕಾಲುವೆಯಲ್ಲಿ ವ್ಯಕ್ತಿಯೊಬ್ಬರ ಶವ ಬೆತ್ತಲೆ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.

ಗ್ರಾಮೀಣ ಠಾಣೆ ಪೊಲೀಸರು ಕಾಲುವೆಯಿಂದ ಶವವನ್ನು ಹೊರಕ್ಕೆ ತೆಗೆದಿದ್ದು ವ್ಯಕ್ತಿಯನ್ನು ಬಿಹಾರ ಮೂಲದ ಕೃಷ್ಣ (30) ಎಂದು ಗುರುತಿಸಲಾಗಿದೆ.

ಕೃಷ್ಣ ತೋರಣಗಲ್ಲಿನ ಜಿಂದಾಲ್ ಕಾರ್ಖಾನೆಯಲ್ಲಿ ವೆಲ್ಡರ್ ಆಗಿ ಕೆಲಸ ಮಾಡುತ್ತಿದ್ದ. ತೋರಣಗಲ್ಲು ಬಳಿಯ ತುಂಗಭದ್ರಾ ಎಚ್‌ಎಲ್‌ಸಿ ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋದಾಗ ಕಾಲು ಜಾರಿ ಬಿದ್ದು ಸಾವನ್ನಪ್ಪಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತೋರಣಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.