ADVERTISEMENT

ಎತ್ತಿನ ಬಂಡಿಗೆ ಬೈಕ್ ಡಿಕ್ಕಿ: ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2024, 3:35 IST
Last Updated 27 ಫೆಬ್ರುವರಿ 2024, 3:35 IST

ತೋರಣಗಲ್ಲು (ಬಳ್ಳಾರಿ ಜಿಲ್ಲೆ): ಹೋಬಳಿಯ ಹಸದರೋಜಿ ಗ್ರಾಮದ ಕೆರೆ ಬಳಿ ಸೋಮವಾರ ರಸ್ತೆ ಬದಿಯಿದ್ದ ಎತ್ತಿನ ಬಂಡಿಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.

‘ಹೊಸಪೇಟೆಯ ಆಶಾ (8), ಅಖಿಲಾ (6) ಮತ್ತು ವೆಂಕಟೇಶ್ (45) ಮೃತರು. ಸರಸ್ವತಿ ಮತ್ತು ಜಂಬಕ್ಕ ಎಂಬುವರಿಗೆ ಗಾಯಗಳಾಗಿದ್ದು, ಬಳ್ಳಾರಿಯ ವಿಮ್ಸ್‌ಗೆ ದಾಖಲಿಸಲಾಗಿದೆ. ಒಟ್ಟು ಐವರು ಒಂದೇ ಬೈಕ್‍ನಲ್ಲಿ ಬಳ್ಳಾರಿಯಿಂದ ಹೊಸಪೇಟೆಗೆ ತೆರಳುವಾಗ ದುರ್ಘಟನೆ ಸಂಭವಿಸಿದೆ’ ಎಂದು ಕುಡತಿನಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT