ADVERTISEMENT

ಕಾನಹೊಸಹಳ್ಳಿ | ಟ್ರ್ಯಾಕ್ಟರ್ ಹರಿದು ರೈತ ಸಾವು

​ಪ್ರಜಾವಾಣಿ ವಾರ್ತೆ
Published 12 ಜೂನ್ 2024, 14:32 IST
Last Updated 12 ಜೂನ್ 2024, 14:32 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಕಾನಹೊಸಹಳ್ಳಿ: ಸಮೀಪದ ಬಣವಿಕಲ್ಲು ಗ್ರಾಮದಲ್ಲಿ ಟ್ರ್ಯಾಕ್ಟರ್ ಹರಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಸಂಭವಿಸಿದೆ.

ಬಣವಿಕಲ್ಲು ಗ್ರಾಮದ ಆರ್.ಜಗದೀಶ್(28) ಮೃತಪಟ್ಟ ರೈತ. 20 ದಿನಗಳ ಹಿಂದೆ ಹೊಸ ಟ್ರ್ಯಾಕ್ಟರ್ ಖರೀದಿಸಿದ್ದರು. ಹಾರಕಭಾವಿ ರಸ್ತೆಯ ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡಿ ಮರಳಿ ಬರುವಾಗ ಬದುವಿನ ಬಳಿ ನಿಯಂತ್ರ ತಪ್ಪಿ ಟೈರ್ ಕೆಳಗೆ ಬಿದ್ದಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ADVERTISEMENT

ಕಾನಹೊಸಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.