ADVERTISEMENT

ನಾಗೇಂದ್ರಗೆ ಜಾಮೀನು: ಅಭಿಮಾನಿಗಳ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2024, 16:08 IST
Last Updated 14 ಅಕ್ಟೋಬರ್ 2024, 16:08 IST
ಬಳ್ಳಾರಿ ನಗರದ ಗಡಿಗಿ ಚೆನ್ನಪ್ಪ (ರಾಯಲ್‌) ವೃತ್ತದ ಬಳಿ ಸೋಮವಾರ ಸಂಜೆ ಸಂಭ್ರಮಾಚರಣೆ ಮಾಡಿದ ಬಿ.ನಾಗೇಂದ್ರ ಅಭಿಮಾನಿಗಳು. 
ಬಳ್ಳಾರಿ ನಗರದ ಗಡಿಗಿ ಚೆನ್ನಪ್ಪ (ರಾಯಲ್‌) ವೃತ್ತದ ಬಳಿ ಸೋಮವಾರ ಸಂಜೆ ಸಂಭ್ರಮಾಚರಣೆ ಮಾಡಿದ ಬಿ.ನಾಗೇಂದ್ರ ಅಭಿಮಾನಿಗಳು.    

ಬಳ್ಳಾರಿ: ವಾಲ್ಮೀಕಿ ನಿಗಮದ ಹಗರಣದಲ್ಲಿ ಬಂಧಿಯಾಗಿದ್ದ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರಿಗೆ ಜಾಮೀನು ಮಂಜೂರಾಗಿದ್ದು, ಅವರ ಅಭಿಮಾನಿಗಳು, ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ನಗರದಲ್ಲಿ ಸಂಭ್ರಮಾಚರಣೆ ಮಾಡಿದರು. 

ನಗರದ ಗಡಿಗಿ ಚೆನ್ನಪ್ಪ (ರಾಯಲ್‌) ವೃತ್ತದ ಬಳಿ ಜಮಾಯಿಸಿದ ಅಭಿಮಾನಿಗಳು ಪರಸ್ಪರ ಸಿಹಿ ಹಂಚಿಕೊಂಡರು. ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದರು. ‘ಜೈ ನಾಗೇಂದ್ರಣ್ಣ’ ಎಂಬ ಘೋಷಣೆ ಕೂಗಿದರು. 

ವಾಲ್ಮೀಕಿ ನಿಗಮದಲ್ಲಿನ ಹಗರಣದಲ್ಲಿ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಜುಲೈ 12ರಂದು ಬಂಧಿಸಿದ್ದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.