ADVERTISEMENT

ಚನ್ನಪಟ್ಟಣ ಉಪಚುನಾವಣೆ | ಸ್ಪರ್ಧಿಸಲು ಯಾವುದೇ ಭಯವಿಲ್ಲ: ನಿಖಿಲ್ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 16:26 IST
Last Updated 19 ಅಕ್ಟೋಬರ್ 2024, 16:26 IST
ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ   

ಬಳ್ಳಾರಿ: ‘ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಯಾವುದೇ ರೀತಿಯ ಹೆದರಿಕೆ ಇಲ್ಲ’ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು. 

‘ಚನ್ನಪಟ್ಟಣದಲ್ಲಿ ಸಾಮಾನ್ಯ ಕಾರ್ಯಕರ್ತ ಸ್ಪರ್ಧಿಸಿದರೂ 80 ಸಾವಿರ ಮತಗಳು ಬರುತ್ತವೆ. ಇನ್ನೂ 15 ಸಾವಿರ ಮತಗಳು ಬೇಕಾಗುತ್ತವೆ. ಹೀಗಾಗಿ ಅವಕಾಶ ಒದಗಿ ಬಂದರೆ, ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಪಕ್ಷದ ಕಾರ್ಯಕರ್ತರ ರಕ್ಷಣೆಯೇ ನಮಗೆ ಮುಖ್ಯ. ನಮ್ಮದು ಎನ್‌ಡಿಎ ಕುಟುಂಬ. ಮೋದಿ ಅಥವಾ ಅಮಿತ್‌ ಶಾ ಅವರನ್ನು ನಾವು ಮೀರಿ ಹೋಗುವ ಪ್ರಶ್ನೆ ಇಲ್ಲ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.