ADVERTISEMENT

ಕೂಡ್ಲಿಗಿ: ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2024, 14:20 IST
Last Updated 20 ಆಗಸ್ಟ್ 2024, 14:20 IST

ಕೂಡ್ಲಿಗಿ: ತಾಲ್ಲೂಕಿನಲ್ಲಿ ಭಾಕಿ ಉಳಿದಿರುವ ಪಡಿತರ ಚೀಟಿಗಳನ್ನು ಇ-ಕೆವೈಸಿ ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಎಂ. ರೇಣುಕಾ ಅವರು ಪಡಿತರ ಚೀಟಿದಾರರಿಗೆ ಸೂಚನೆ ನೀಡಿದ್ದಾರೆ.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ನೀಡಿರುವ ಪಡಿತರ ಚೀಟಿಗಳನ್ನು ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಸಾಕಷ್ಟು ಪ್ರಚಾರ ಕೈಗೊಂಡು, ಅರಿವು ಮೂಡಿಸಿದ್ದರು, ತಾಲ್ಲೂಕಿನಲ್ಲಿ 8006 ಫಲಾನುಭವಿಗಳ ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಬಾಕಿ ಉಳಿದುಕೊಂಡಿವೆ.

ಈ ಕುರಿತು ಸರ್ಕಾರದ ಕಾರ್ಯದರ್ಶಿಗಳ ನಿರ್ದೇಶನದಂತೆ ಅಗಸ್ಟ್ 31 ಇ- ಕೆವೈಸಿ ಮಾಡಿಸಲು ಕೊನೆ ದಿನವಾಗಿರುತ್ತದೆ. ಈ ಅವಧಿಯನ್ನು ನಂತರ ಬಾಕಿ ಉಳಿದಿರುವ ಪಡಿತರ ಚೀಟಿಯ ಫಲಾನುಭವಿಗಳನ್ನು ಅನರ್ಹರೆಂದು ಪರಿಗಣಿಸಿ, ಪಡಿತರ ಚೀಟಿಗಳನ್ನು ತಗೆದು ಹಾಕಲಾಗುವುದು ಎಂದು ತಿಳಿಸಿರುವ ಅವರು, ತಾಲ್ಲೂಕಿನಲ್ಲಿ ಭಾಕಿ ಉಳಿದಿರುವ ಫಲಾನುಭವಿಗಳು ನಿಗದಿತ ದಿನದೊಳಗೆ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಮಾನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.