ಕಂಪ್ಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ಥಳಿಯ ಪೊಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ ರೌಡಿಶೀಟರ್ಗಳ ಪರೇಡ್ ನಡೆಸಲಾಯಿತು.
ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ಮಾಳಿ ಮಾತನಾಡಿ, ‘ಚುನಾವಣೆ ಸಂದರ್ಭದಲ್ಲಿ ಅಕ್ರಮ ಚಟುವಟಿಗೆಳಲ್ಲಿ ತೊಡಗಿಕೊಳ್ಳುವುದು, ಮತದಾರರಿಗೆ ಬೆದರಿಕೆ ಹಾಕುವುದು, ಆಮಿಷ ಒಡ್ಡುವುದು, ತೊಂದರೆ ಕೊಡುವುದು, ಪ್ರಭಾವ ಬೀರುವುದು ಕಾನೂನು ರೀತಿ ಅಪರಾಧವಾಗಿದೆ. ಪಾರದರ್ಶಕ, ಶಾಂತ ಮತ್ತು ಸುವ್ಯವಸ್ಥಿತ ಚುನಾವಣೆಗೆ ಭಂಗವನ್ನುಂಟು ಮಾಡಿದರೆ ಗಡಿಪಾರು ಮಾಡಲಾಗುವುದು’ ಎಂದು ರೌಡಿಶೀಟರ್ಗಳಿಗೆ ಎಚ್ಚರಿಗೆ ನೀಡಿದರು.
ಕಾನೂನು ಸುವ್ಯವಸ್ಥೆ ವಿಭಾಗದ ಪಿಎಸ್ಐ ಶೇಷಾಚಲಂ ನಾಯ್ಡು, ಅಪರಾಧ ವಿಭಾಗದ ಪಿಎಸ್ಐ ಧರ್ಮಣ್ಣ, ಅಪರಾಧ ವಿಭಾಗದ ಸಿಬ್ಬಂದಿ ವಿಜಯಕುಮಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.