ADVERTISEMENT

ಮೂಡಲಗಿ | ರಸಗೊಬ್ಬರ ಮಳಿಗೆ ಮೇಲೆ ದಾಳಿ

ಕೃಷಿ ಇಲಾಖೆ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ: ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2024, 16:01 IST
Last Updated 12 ಜೂನ್ 2024, 16:01 IST
ಮೂಡಲಗಿ ತಾಲ್ಲೂಕಿನ ಕಲ್ಲೋಳಿಯಲ್ಲಿ ರಸಗೊಬ್ಬರ ಮಳಿಗೆಯಲ್ಲಿ  ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ ದಾಖಲೆಗಳನ್ನು ಪರಿಶೀಲಿಸುತ್ತಿರುವರು.  ಕೃಷಿ ಅಧಿಕಾರಿ ವಿನಾಯಿಕ ತುರಾಯಿದಾರ ಚಿತ್ರದಲ್ಲಿ ಇರುವರು. 
ಮೂಡಲಗಿ ತಾಲ್ಲೂಕಿನ ಕಲ್ಲೋಳಿಯಲ್ಲಿ ರಸಗೊಬ್ಬರ ಮಳಿಗೆಯಲ್ಲಿ  ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ ದಾಖಲೆಗಳನ್ನು ಪರಿಶೀಲಿಸುತ್ತಿರುವರು.  ಕೃಷಿ ಅಧಿಕಾರಿ ವಿನಾಯಿಕ ತುರಾಯಿದಾರ ಚಿತ್ರದಲ್ಲಿ ಇರುವರು.    

ಮೂಡಲಗಿ: ಮೂಡಲಗಿ ತಾಲ್ಲೂಕಿನ ಕಲ್ಲೋಳಿ, ತುಕ್ಕಾನಟ್ಟಿ ಗ್ರಾಮಗಳಲ್ಲಿ ಕೃಷಿ ಪರಿಕರ ರಸಗೊಬ್ಬರ, ಬೀಜ, ಕೀಟನಾಶಕ ಮಳಿಗೆಗಳ ಮೇಲೆ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ ಹಾಗೂ ಕೃಷಿ ಅಧಿಕಾರಿ ವಿನಾಯಿಕ ತುರಾಯಿದಾರ ನೇತೃತ್ವದಲ್ಲಿ ದಾಳಿ ಮಾಡಿ ರಸಗೊಬ್ಬರ, ಬೀಜಗಳ ದಾಸ್ತಾನು ಮತ್ತು ವಿತರಣೆ ಸೇರಿದಂತೆ ದಾಖಲೆಗಳನ್ನು ಪರಿಶೀಲನೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಂ.ಎಂ.ನದಾಫ, ‘ರಸಗೊಬ್ಬರ ಮತ್ತು ಬೀಜಗಳನ್ನು ಹೆಚ್ಚಿನ ದರಕ್ಕೆ ರೈತರಿಗೆ ಮಾರಾಟ ಮಾಡಿದರೆ ಅಂತವರ ಮೇಲೆ ಶಿಸ್ತು ಕಾನೂನು ಕ್ರಮ ಜರುಗಿಸಲಾಗುವುದು ಮತ್ತು ಪರವಾನಗೆಯನ್ನು ರದ್ದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಾರಾಟಗಾರರು ಸರ್ಕಾರದ ಹಾಗೂ ಇಲಾಖೆಯ ನಿಯಮಗಳನ್ನು ಪಾಲಿಸಬೇಕು. ದರಪಟ್ಟಿ ಮತ್ತು ರಸಗೊಬ್ಬರ ದಾಸ್ತಾನು ಲಭ್ಯತೆ ಬಗ್ಗೆ ಮಾಹಿತಿ ಫಲಕಗಳನ್ನು ಮಳಿಗೆಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ರಸಗೊಬ್ಬರವನ್ನು ಪಿಓಎಸ್‌ ಮಶೀನ್‌ ಮೂಲಕವೇ ವಿತರಣೆ ಮಾಡಬೇಕು ಎಂದರು.

ADVERTISEMENT

ಈ ವರ್ಷ ಮುಂಗಾರು ಹಂಗಾಮು ಉತ್ತಮ ಮಳೆಯಿಂದ ಪ್ರಾರಂಭವಾಗಿದ್ದರಿಂದ ರೈತರಿಗೆ ಗುಣಮಟ್ಟದ  ಬೀಜ ಪೂರೈಸಬೇಕು ಹಾಗೂ ಕಡ್ಡಾಯವಾಗಿ ರೈತರಿಗೆ ರಶೀದಿಗಳನ್ನು ನೀಡಬೇಕು. ಕೃಷಿ ಇಲಾಖೆಯಿಂದ ಪ್ರತಿಯೊಂದು ರಸಗೊಬ್ಬರ ಮಳಿಗೆಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ, ಅವರು ಮಳಿಗೆಗೆಗಳಿಗೆ ಭೇಟ್ಟಿ ನೀಡಿ ಬೀಜ, ಇತರೆ ಕೃಷಿ ಪರಿಕರಗಳ ಗುಣಮಟ್ಟ ಹಾಗೂ ಯೂರಿಯಾ, ಡಿಎಪಿ ರಸಗೊಬ್ಬರಗಳ ದಾಸ್ತಾನು, ಭೌತಿಕ ದಾಸ್ತಾನು ಪರಿಶೀಲಿಸುವರು. ರೈತರಿಂದ ಯಾವುದೇ ದೂರುಗಳು ಬಂದರೆ ರಸಗೊಬ್ಬರ ಮಾರಾಟಗಾರರ ಮೇಲೆ ಅಗತ್ಯ ವಸ್ತುಗಳ ಅಧಿನಿಯಮ 1955ರ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿರುವರು.

ಮೂಡಲಗಿ ತಾಲ್ಲೂಕಿನ ಕಲ್ಲೋಳಿಯಲ್ಲಿ ರಸಗೊಬ್ಬರ ಮಳಿಗೆಯಲ್ಲಿ  ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ ದಾಖಲೆಗಳನ್ನು ಪರಿಶೀಲಿಸುತ್ತಿರುವರು.  ಕೃಷಿ ಅಧಿಕಾರಿ ವಿನಾಯಿಕ ತುರಾಯಿದಾರ ಚಿತ್ರದಲ್ಲಿ ಇರುವರು. 

Quote - ಈ ವರ್ಷ ಮುಂಗಾರು ಹಂಗಾಮು ಉತ್ತಮ ಮಳೆಯಿಂದ ಪ್ರಾರಂಭವಾಗಿದ್ದರಿಂದ ರೈತರಿಗೆ ಗುಣಮಟ್ಟದ ಗೋವಿನ ಜೋಳದ ಬಿತ್ತನೆ ಬೀಜ ಪೂರೈಸಬೇಕು ಎಂ.ಎಂ.ನದಾಫ ಸಹಾಯಕ ಕೃಷಿ ನಿರ್ದೇಶಕ ಕೃಷಿ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.