ADVERTISEMENT

ಪಶ್ಚಿಮ ಬಂಗಾಳ ವೈದ್ಯರ ಹೋರಾಟಕ್ಕೆ ಬೆಂಬಲ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2024, 12:55 IST
Last Updated 16 ಅಕ್ಟೋಬರ್ 2024, 12:55 IST
ಹರಪನಹಳ್ಳಿ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಎಸಿ ಚಿದಾನಂದಮೂರ್ತಿ ಅವರಿಗೆ ಮನವಿ ಸಲ್ಲಿಸಿದರು
ಹರಪನಹಳ್ಳಿ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಎಸಿ ಚಿದಾನಂದಮೂರ್ತಿ ಅವರಿಗೆ ಮನವಿ ಸಲ್ಲಿಸಿದರು    

ಹರಪನಹಳ್ಳಿ : ಪಶ್ಚಿಮ ಬಂಗಾಳದ ಯುವ ವೈದ್ಯ ವಿದ್ಯಾರ್ಥಿಗಳು ಹಾಗೂ ಯುವ ವೈದ್ಯರು ನಡೆಸುತ್ತಿರುವ ಸತ್ಯಾಗ್ರಹ ಬೆಂಬಲಿಸಿ ಇಲ್ಲಿಯ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಐಎಂಎ ತಾಲ್ಲೂಕು ಅಧ್ಯಕ್ಷ ಡಾ.ಮಹೇಶ್ ಮಾತನಾಡಿ, ಪಶ್ಚಿಮ ಬಂಗಾಳದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಭದ್ರತೆ, ರಕ್ಷಣೆ, ಮೂಲ ಸೌಕರ್ಯ ಸೇರಿ ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಅಲ್ಲಿನ ಸರ್ಕಾರ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.

ಹಿರಿಯ ವೈದ್ಯರಾದ ಡಾ.ಕೆ.ಎಂ.ಎನ್.ಖಾನ್, ಡಾ.ಮಂಜುನಾಥ, ಡಾ.ಹರ್ಷ ಜಿ.ವಿ, ಡಾ.ಕಿಷನ್ ಭಾಗವತ್, ಡಾ.ರಘು ಅಧಿಕಾರ, ಡಾ.ವಿಶ್ವರಾಧ್ಯ, ಡಾ.ಹರ್ಷ ಕಟ್ಟಿ, ಡಾ.ಕೊಟ್ರೇಶ್, ಡಾ.ಸಂಗೀತಾ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.