ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ಆನೇಕಲ್ ತಾಂಡಾದ ಎನ್.ವಿಜಯಕುಮಾರ್ ಅವರು ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಪ್ರಾಥಮಿಕ, ಪ್ರೌಢ ಮತ್ತು ಪಿಯು, ಪದವಿ ಶಿಕ್ಷಣ ಪೂರೈಸಿರುವ ಅವರು, ಮೂರನೇ ಪ್ರಯತ್ನದಲ್ಲಿ ಉತ್ತೀರ್ಣರಾಗುವ ಮೂಲಕ ನ್ಯಾಯಾಧೀಶರಾಗುವ ಕನಸು ನನಸಾಗಿಸಿಕೊಂಡಿದ್ದಾರೆ.
‘ದಾಖಲೆಗಳ ಪರಿಶೀಲನೆ ಬಳಿಕ ನೇಮಕಾತಿ ಪತ್ರ ಕೈಸೇರಲಿದೆ. ಸತತ ಪರಿಶ್ರಮದಿಂದ ಸಾಧನೆ ಮಾಡಲು ಸಾಧ್ಯವಾಯಿತು’ ಎಂದು ‘ಪ್ರಜಾವಾಣಿ’ಯೊಂದಿಗೆ ವಿಜಯಕುಮಾರ್ ಖುಷಿ ಹಂಚಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.