ಕುಡತಿನಿ (ತೋರಣಗಲ್ಲು): ಪಟ್ಟಣದ ಹೊರ ವಲಯದಲ್ಲಿನ ಕುಡತಿನಿ, ಕುರುಗೋಡು ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಸೇತುವೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಮುಖಂಡರು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.
ಕುಡತಿನಿಯ ಬಿಜೆಪಿ ಮುಖಂಡ ಜಿ.ಗುರುಮೂರ್ತಿ ಮಾತನಾಡಿ, ‘ರೈಲ್ವೆ ಸೇತುವೆ ಕಾಮಗಾರಿಯು ಸುಮಾರು 5 ವರ್ಷಗಳಿಂದ ವಿಳಂಬವಾಗಿ ನಡೆಯುತ್ತಿದ್ದು, ವಿವಿಧ ಗ್ರಾಮಗಳಿಗೆ ತೆರಳುವ ಪ್ರಯಾಣಿಕರು, ಶಾಲಾ–ಕಾಲೇಜು ವಿದ್ಯಾರ್ಥಿಗಳು, ಜಮೀನುಗಳಿಗೆ ತೆರಳುವ ರೈತರು ಸಂಚಾರಕ್ಕಾಗಿ ನಿತ್ಯ ಪರದಾಡುತ್ತಿದ್ದಾರೆ. ಸಾರ್ವಜನಿಕರ ಅನುಕೂಲಕ್ಕಾಗಿ ರೈಲ್ವೆ ಮೇಲ್ಮಟ್ಟದ ಸೇತುವೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ಒತ್ತಾಯಿಸಿದರು.
‘2025ರ ಮಾರ್ಚ್ ಒಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು’ ಎಂದು ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.
ಮುಖಂಡರಾದ ಎಲೆಗಾರ ಪಂಪಾಪತಿ, ಕೋಟೆ ವೀರಾರೆಡ್ಡಿ, ಪಂಪಯ್ಯಸ್ವಾಮಿ, ಬಿಜೆಪಿ ಕಾರ್ಯಕರ್ತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.