ADVERTISEMENT

ವಿಜಯಪುರ: ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಕಾರು

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2024, 4:43 IST
Last Updated 23 ಮಾರ್ಚ್ 2024, 4:43 IST
ವಿಜಯಪುರ ಹೋಬಳಿ ವೆಂಕಟಗಿರಿಕೋಟೆ ಕ್ರಾಸ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್‌ಗೆ ಡಿಕ್ಕಿಹೊಡೆದ ಜಖಂಗೊಂಡಿರುವ ವಾಹನ
ವಿಜಯಪುರ ಹೋಬಳಿ ವೆಂಕಟಗಿರಿಕೋಟೆ ಕ್ರಾಸ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್‌ಗೆ ಡಿಕ್ಕಿಹೊಡೆದ ಜಖಂಗೊಂಡಿರುವ ವಾಹನ   

ವಿಜಯಪುರ(ದೇವನಹಳ್ಳಿ): ಹೋಬಳಿಯ ವೆಂಕಟಗಿರಿಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಹೈದಾರ್‌ಬಾದ್‌ ಕಡೆಯಿಂದ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ, ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಸಿಮೆಂಟ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.

ಕಾರು ಡಿಕ್ಕಿ ಹೊಡೆದಿರುವ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದವರು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಯುವತಿಗೆ ಗಾಯ ಆಗಿದೆ.

ಸಮೀಪದ ಚೆಕ್ ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರು, ಕಾರಿನಲ್ಲಿ ಸಿಲುಕಿಕೊಂಡಿದ್ದ ಚಾಲಕನನ್ನು ಸ್ಥಳೀಯರ ಸಹಕಾರದಿಂದ ರಕ್ಷಣೆ ಮಾಡಿ, ಇಬ್ಬರು ಗಾಯಾಳುಗಳನ್ನು ದೇವನಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.