ADVERTISEMENT

ಅತ್ತಿಬೆಲೆ ಪಟಾಕಿ ದುರಂತ: ಅಂಗಡಿ ಮಾಲೀಕ, ಮಗ ಬಂಧನ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2023, 4:21 IST
Last Updated 8 ಅಕ್ಟೋಬರ್ 2023, 4:21 IST
<div class="paragraphs"><p>–ಸಾಂದರ್ಭಿಕ ಚಿತ್ರ</p></div>

–ಸಾಂದರ್ಭಿಕ ಚಿತ್ರ

   

ಬೆಂಗಳೂರು: ಅತ್ತಿಬೆಲೆ‌ ಪಟಾಕಿ ದುರಂತ ಪ್ರಕರಣ ದಾಖಲಿಸಿಕೊಂಡಿರುವ‌ ಪೊಲೀಸರು, ಬಾಲಾಜಿ ಟ್ರೇಡರ್ಸ್ ಮಳಿಗೆಯ ಮಾಲೀಕರಾದ ವಿ. ರಾಮಸ್ವಾಮಿ ರೆಡ್ಡಿ ಹಾಗೂ ನವೀನ್‌ ಅವರನ್ನು ಬಂಧಿಸಿದ್ದಾರೆ.

'ಸ್ಫೋಟಕ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಚ್‌ಎಸ್ಆರ್ ಲೇಔಟ್ ನಿವಾಸಿ ಜಯಮ್ಮ ಹಾಗೂ ಅವರ ಮಗ ಅನಿಲ್ ರೆಡ್ಡಿ ಅವರ ಹೆಸರಿನಲ್ಲಿರುವ‌ ಜಾಗದಲ್ಲಿ ಪಟಾಕಿ ಅಂಗಡಿ ಇತ್ತು' ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ‌ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

ADVERTISEMENT

'ಪ್ರಕರಣ ದಾಖಲಿಸಿಕೊಂಡು ಅಪ್ಪ ರಾಮಸ್ವಾಮಿ ರೆಡ್ಡಿ ಹಾಗೂ ಮಗ ನವೀನ್‌ನನ್ನು ಬಂಧಿಸಲಾಗಿದೆ. ಗಾಯಗೊಂಡಿರುವ ನವೀನ್ ಸದ್ಯ ಆಸ್ಪತ್ರೆಯಲ್ಲಿದ್ದು, ನಮ್ಮ ಕಸ್ಟಡಿಯಲ್ಲಿದ್ದಾರೆ' ಎಂದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.