ದೊಡ್ಡಬಳ್ಳಾಪುರ: ತಾಲ್ಲೂಕಿನ ತಪಸೀಹಳ್ಳಿ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಗೌರಿಬಿದನೂರು ತಾಲ್ಲೂಕಿನ ನಕ್ಕಲಹಳ್ಳಿ ಗ್ರಾಮದ ತೇಜು (29) ಮೃತ ಯುವಕ.
ಯಲಹಂಕದಲ್ಲಿ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದ ತೇಜು ರಾತ್ರಿ ನಕ್ಕಲಹಳ್ಳಿಯಿಂದ ಯಲಹಂಕಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಹಿಂದೂಪುರ-ಯಲಹಂಕ ನಡುವಿನ ರಾಜ್ಯ ಹೆದ್ದಾರಿಯ ತಪಸೀಹಳ್ಳಿ ಬಳಿ ರಸ್ತೆ ಬದಿ ಕೆಟ್ಟು ನಿಂತ ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.