ADVERTISEMENT

ಅಪಘಾತದಲ್ಲಿ ಕಾನ್‌ಸ್ಟೆಬಲ್ ಸಾವು

ಸಾವು

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 14:57 IST
Last Updated 11 ಜುಲೈ 2024, 14:57 IST
ದಾದಾವಲಿ
ದಾದಾವಲಿ    

ಹೊಸಕೋಟೆ: ತಾಲ್ಲೂಕಿನ ಅನುಗೊಂಡನಹಳ್ಳಿ ಠಾಣೆಯಲ್ಲಿ ಕಾನ್‌ಸ್ಟೆಬಲ್‌ ಆಗಿ ಕೆಲಸ ಮಾಡುತ್ತಿದ್ದ ಬಳ್ಳಾರಿ ಮೂಲದ ದಾದಾವಲಿ (32) ಮಂಗಳವಾರ ರಾತ್ರಿ ಠಾಣೆಗೆ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಚನ್ನಸಂದ್ರ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ನೀರಿನ ಟ್ಯಾಂಕರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 2020ರಲ್ಲಿ ಪೋಲೀಸ್ ಇಲಾಖೆಗೆ ಸೇರಿದ್ದರು.

ಮೃತರಿಗೆ ತಂದೆ, ತಾಯಿ, ನಾಲ್ವರು ಸೋದರರು, ಪತ್ನಿ ಇದ್ದಾರೆ. ಬುಧವಾರ ಬಳ್ಳಾರಿಯಲ್ಲಿ ಅಂತ್ಯಕ್ರಿಯೆ ನಡೆಯಿತು. ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಡಿವೈಎಸ್‌ಪಿ ಅಣ್ಣಾ ಸಾಹೇಬ್ ಶಂಕರ ಗೌಡ ಪಾಟೀಲ್ ಸೇರಿದಂತೆ ತಾಲ್ಲೂಕಿನ ಎಲ್ಲ ಠಾಣೆಗಳ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.