ADVERTISEMENT

ದೊಡ್ಡಬಳ್ಳಾಪುರ: ವಾಹನ ಡಿಕ್ಕಿ- ಪಾದಚಾರಿ ಸಾವು

​ಪ್ರಜಾವಾಣಿ ವಾರ್ತೆ
Published 17 ಜನವರಿ 2024, 16:00 IST
Last Updated 17 ಜನವರಿ 2024, 16:00 IST
ಶಿವಶಂಕರಪ್ಪ
ಶಿವಶಂಕರಪ್ಪ   

ದೊಡ್ಡಬಳ್ಳಾಪುರ: ನಗರದ ಬಸವ ಭವನ ಸಮೀಪದ ಡೇರಿ ಮುಂಭಾಗ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ.

ನಗರದ ರಾಜೀವ್‌ಗಾಂಧಿ ಬಡಾವಣೆ 2ನೇ ಹಂತದ ಗಂಗಧಾರಪುರ ನಿವಾಸಿ ಶಿವಶಂಕರಪ್ಪ(54 ) ಮೃತರು.

ಶಿವಶಂಕರಪ್ಪ ಯಲಹಂಕದ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದು, ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಬಯೋಮೆಟ್ರಿಕ್‌ ನೀಡಲು ಯಲಹಂಕದಿಂದ ನಗರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬಸ್ ಇಳಿದು ಮನೆಗೆ ನಡೆದುಕೊಂಡು ಹೋಗುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಅಪಘಾತ ನಡೆಸಿರುವ ವಾಹನ ಇನ್ನೂ ಪತ್ತೆಯಾಗಿಲ್ಲ. ಅಪಘಾತಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.