ADVERTISEMENT

ಆನೇಕಲ್ | ವಿದ್ಯುತ್ ಸ್ಪರ್ಶ: ಕಾಡಾನೆ ಸಾವು

​ಪ್ರಜಾವಾಣಿ ವಾರ್ತೆ
Published 8 ಮೇ 2024, 22:53 IST
Last Updated 8 ಮೇ 2024, 22:53 IST
<div class="paragraphs"><p>ಆನೇಕಲ್‌ಗೆ ಸಮೀಪದ ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಚಂದನಪಲ್ಲಿಯಲ್ಲಿ ಮಂಗಳವಾರ ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತಪಟ್ಟಿದೆ</p></div>

ಆನೇಕಲ್‌ಗೆ ಸಮೀಪದ ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಚಂದನಪಲ್ಲಿಯಲ್ಲಿ ಮಂಗಳವಾರ ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತಪಟ್ಟಿದೆ

   

ಆನೇಕಲ್: ಸಮೀಪದ ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಚಂದನಪಲ್ಲಿಯಲ್ಲಿ ಮಂಗಳವಾರ ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಕಾಡಾನೆಗಳ ಹಿಂಡಿನ ಸಲಗವೊಂದು ವಿದ್ಯುತ್‌ ಸ್ಪರ್ಶದಿಂದ ಮೃತಪಟ್ಟಿದೆ.

ಸುಮಾರು ಹತ್ತು ವರ್ಷದ ಗಂಡಾನೆ ಮೃತಪಟ್ಟಿದೆ. ಡೆಂಕಣಿಕೋಟೆ ಅರಣ್ಯ ಇಲಾಖೆಯ ಸಿಬ್ಬಂದಿ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯ ಸಂಸ್ಕಾರ ನಡೆಸಿದರು.

ADVERTISEMENT

ಡೆಂಕಣಿಕೋಟೆ, ಜವಳಗೆರೆ ಅರಣ್ಯ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಕಾಡಾನೆಗಳ ಹಿಂಡಿದ್ದು ಪ್ರತಿದಿನ ಕಾಡಿನಿಂದ ಗ್ರಾಮಗಳತ್ತ ಬರುತ್ತಿವೆ. ಹಾಗಾಗಿ ರೈತರು ಆತಂಕದಿಂದ ಜೀವನ ಸಾಗಿಸಬೇಕಾದ ಪರಿಸ್ಥಿತಿಯಿದೆ. ತೋಟದ ಬೆಳೆಗಳನ್ನು ರಕ್ಷಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.