ದೇವನಹಳ್ಳಿ: ತಾಲ್ಲೂಕಿನ ಆವತಿ ಸರ್ಕಾರಿ ಗ್ರಾಮಾಂತರ ಪ್ರೌಢಶಾಲೆ ವಿದ್ಯಾರ್ಥಿಗಳಾದ ಶಾಂತಾ, ಯೋಗಿತಾಶ್ರೀ, ಅಪರ್ಣ, ಸುದೀಪ್ ರಾಜ್ಯಮಟ್ಟದ ಫೆನ್ಸಿಂಗ್ ಕ್ರೀಡಾಕೂಟದಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ.
ಅಕ್ಟೋಬರ್ 13ರಿಂದ 14ರಂದು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆದಿದ್ದು, ವಿಜೇತ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಕ್ರೀಡಾಪಟುಗಳಿಗೆ ಯುವಜನ ಮತ್ತು ಸೇವಾ ಇಲಾಖೆ ವತಿಯಿಂದ ಕಾರ್ತಿಕ್ ಬಿ.ಎಸ್ ಹಾಗೂ ನಿಖಿಲ್ ತರಬೇತಿ ನೀಡಿದ್ದರು. ಕ್ರೀಡಾಕೂಟದ ಮುಖ್ಯ ತೀರ್ಪುಗಾರ ದೇಬಾನ್ ಸಿಂಗ್ ಬಹುಮಾನ ವಿತರಣೆ ಮಾಡಿದರು. ಇದೇ ವೇಳೆ ದೈಹಿಕ ಶಿಕ್ಷಣ ಶಿಕ್ಷಕರಾದ ಚಂದ್ರಶೇಖರ್, ನರಸಿಂಹಮೂರ್ತಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.