ಆನೇಕಲ್: ತಾಲ್ಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಶನಿವಾರವು ಮುಂದುವರೆದಿದ್ದು, ರಸ್ತೆಗಳಲ್ಲಿ ನೀರು ತುಂಬಿಕೊಂಡ ಸಂಚರಿಸಲು ವಾಹನ ಸವಾರರು ಪರದಾಡಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ಹರಿದಿದ್ದರಿಂದ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರ ಅಸ್ತವ್ಯಸ್ಥವಾಗಿದ್ದು, ಎರಡು ತಾಸಿಗೂ ಹೆಚ್ಚು ಕಾಲ ಸಾರ್ವಜನಿಕರು ಪರದಾಡುವಂತಾಯಿತು. ಮಳೆಯ ನಡುವೆಯೇ ಐಟಿ ಬಿಟಿ ಉದ್ಯೋಗಿಗಳು ತಮ್ಮ ಕಂಪನಿಗಳತ್ತ ಸಾಗುತ್ತಿದ್ದರು.
ರಾಷ್ಟ್ರೀಯ ಹೆದ್ದಾರಿ–44ರ ಎಲೆಕ್ಟ್ರಾನಿಕ್ಸಿಟಿ, ವೀರಸಂದ್ರ, ಚಂದಾಪುರ, ಅತ್ತಿಬೆಲೆಗಳಲ್ಲಿ ರಸ್ತೆಯಲ್ಲಿ ನೀರು ಹರಿಯಿತು.
ವೀರಸಂದ್ರದಲ್ಲಿ ರಸ್ತೆಯಲ್ಲಿ ನೀರು ಹರಿದಿದ್ದರಿಂದ ದ್ವಿಚಕ್ರ ವಾಹನಗಳನ್ನು ತಳ್ಳುತ್ತಾ ರಸ್ತೆಬದಿಗೆ ಸಾಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.