ADVERTISEMENT

ನೆಲಮಂಗಲ: ಕಡಲೆಕಾಯಿ ಪರಿಷೆ ಇಂದು

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2023, 19:58 IST
Last Updated 25 ಡಿಸೆಂಬರ್ 2023, 19:58 IST
ಕಡಲೆಕಾಯಿ ಪರಿಷೆ –ಸಾಂದರ್ಭಿಕ ಚಿತ್ರ
ಕಡಲೆಕಾಯಿ ಪರಿಷೆ –ಸಾಂದರ್ಭಿಕ ಚಿತ್ರ   

ನೆಲಮಂಗಲ: ಪಟ್ಟಣದ ಸೊಂಡೆಕೊಪ್ಪ ರಸ್ತೆಯಲ್ಲಿರುವ ಬಯಲು ಉದ್ಭವ ಗಣಪತಿ ದೇವಸ್ಥಾನದಲ್ಲಿ ಮಂಗಳವಾರ ಕಡಲೆಕಾಯಿ ಪರಿಷೆ ನಡೆಯಲಿದೆ.

ಸೋಮವಾರ ಬೆಳಿಗ್ಗೆ ಧಾರ್ಮಿಕ ವಿಧಿವಿಧಾನ, ರಾತ್ರಿ ಕಲ್ಯಾಣೋತ್ಸವ ನಡೆಯಿತು. ಮಂಗಳವಾರ ಬೆಳಿಗ್ಗೆ ಕ್ಷೀರಾಭಿಷೇಕ, ಮಧ್ಯಾಹ್ನ 1.15ರಿಂದ ಬ್ರಹ್ಮರಥೋತ್ಸವ ನಡೆಯಲಿದೆ. ಬುಧವಾರ ಬೆಳಿಗ್ಗೆ 9.30ಕ್ಕೆ ತೀರ್ಥಸ್ನಾನ ಸೇವೆಯೊಂದಿಗೆ ಸಂಪನ್ನ
ಆಗಲಿದೆ. ಭಕ್ತರಿಗೆ ಪ್ರಸಾದ, ಪಾನಕದ ವ್ಯವಸ್ಥೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT