ADVERTISEMENT

ಕಾಯಕ ಯೋಗಿ ಪ್ರಶಸ್ತಿಗೆ ಎಂ.ಆರ್.ಉಮೇಶ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 13:37 IST
Last Updated 9 ಜುಲೈ 2024, 13:37 IST
ಎಂ.ಆರ್.ಉಮೇಶ್
ಎಂ.ಆರ್.ಉಮೇಶ್   

ಸೂಲಿಬೆಲೆ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ನೀಡುವ ರಾಜ್ಯಮಟ್ಟದ ಕಾಯಕಯೋಗಿ ಪ್ರಶಸ್ತಿಗೆ ರಾಜ್ಯ ಮಾನವ ಹಕ್ಕುಗಳ ಜಾಗೃತಿ ಸಮಿತಿ ಜಿಲ್ಲಾಧ್ಯಕ್ಷ ಎಂ.ಆರ್.ಉಮೇಶ್ ಆಯ್ಕೆಯಾಗಿದ್ದಾರೆ.

ಜುಲೈ 13ರಂದು ಬೀದರ್‌ನ ಚನ್ನಬಸವ ಪಟ್ಟದೇವರ ರಂಗ ಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಸಚಿವ ಈಶ್ವರ್ ಖಂಡ್ರೆ, ರಹೀಂಖಾನ್, ಇಸ್ರೋ ಮಾಜಿ ಅಧ್ಕಕ್ಷ ಕಿರಣ್ ಕುಮಾರ್, ಸಂಶೋಧನಾ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ್ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT