ADVERTISEMENT

ಕಿರಿದಾದ ರಸ್ತೆಯಲ್ಲಿ ಭಾರಿ ವಾಹನ: ಕಡಿವಾಣ ಹಾಕಿ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 16:28 IST
Last Updated 23 ಅಕ್ಟೋಬರ್ 2024, 16:28 IST
ವಿಜಯಪುರದ ಗಾಂಧೀಚೌಕದ ರಸ್ತೆಯಲ್ಲಿ ಸರಕು ಸಾಗಾಣಿಕೆಯ ವಾಹನ ನಿಲ್ಲಿಸಿಕೊಂಡಿರುವುದು.
ವಿಜಯಪುರದ ಗಾಂಧೀಚೌಕದ ರಸ್ತೆಯಲ್ಲಿ ಸರಕು ಸಾಗಾಣಿಕೆಯ ವಾಹನ ನಿಲ್ಲಿಸಿಕೊಂಡಿರುವುದು.   

ವಿಜಯಪುರದಲ್ಲಿ ಹಳೇ ಕೆನರಾ ಬ್ಯಾಂಕ್ ರಸ್ತೆಯ ಮೂಲಕ ಗಾಂಧಿಚೌಕದ ಕಡೆಗೆ ಹೋಗುವ ರಸ್ತೆಯು ಮುಖ್ಯ ವ್ಯಾಪಾರ ಕೇಂದ್ರವಾಗಿದೆ. ಈ ರಸ್ತೆಯು ತೀರಾ ಕಿರಿದಾಗಿದೆ.

ಬೆಳಗಿನ ಸಮಯದಲ್ಲಿ ಜನರು ಉದ್ಯೋಗಕ್ಕಾಗಿ ಹಾಗೂ ಶಾಲಾ–ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಸುತ್ತಮುತ್ತಲಿನ ಗ್ರಾಮಗಳಿಂದ ಬರುವವರು ಇದೇ ರಸ್ತೆಯ ಮೂಲಕ ಬಸ್ ನಿಲ್ದಾಣಕ್ಕೆ ಹೋಗುತ್ತಾರೆ. ಬೆಳಗಿನ ಸಮಯ ಸರಕು ಸಾಗಾಣಿಕೆ ವಾಹನಗಳನ್ನು ತಂದು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿಕೊಂಡು ಸರಕುಗಳನ್ನು ಇಳಿಸಿಕೊಳ್ಳುತ್ತಾರೆ. ಒಂದೊಂದು ಲಾರಿಗಳಲ್ಲಿನ ಸರಕುಗಳನ್ನು ಇಳಿಸಬೇಕಾದರೆ, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಆಗುವುದರಿಂದ ವಾಹನ ಸವಾರರು ಪರದಾಡುವಂತಾಗುತ್ತಿದೆ.

ತ್ವರಿತವಾಗಿ ಹೋಗಬೇಕಾದವರಿಗೆ ತುಂಬಾ ತೊಂದರೆಯಾಗುತ್ತಿದೆ. ವ್ಯಾಪಾರಸ್ಥರಿಗೂ ವ್ಯಾಪಾರ ವಹಿವಾಟುಗಳಿಗೆ ತೊಂದರೆಯಾಗುತ್ತಿದ್ದು, ಸರಕು ಸಾಗಾಣಿಕೆಯ ವಾಹನಗಳನ್ನು ಹಗಲಿನ ವೇಳೆಯಲ್ಲಿ ಈ ರಸ್ತೆ ಪ್ರವೇಶಕ್ಕೆ ನಿರ್ಬಂಧ ಹೇರಬೇಕು.

ADVERTISEMENT

ಯತೀಶ್, ಸ್ಥಳೀಯ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.